
ನವದೆಹಲಿ(ಜ.15): ಸಾವಿಗೇ ಸವಾಲು ಹಾಕಿ, ಸಿಯಾಚಿನ್`ನಲ್ಲಿ ಮಂಜುಗಡ್ಡೆಗಳ ಮಧ್ಯೆ ಜೀವನ್ಮರಣದ ಮಧ್ಯೆ ಹೋರಾಟ ನಡೆಸಿ ಹುತಾತ್ಮನಾದ ವೀರಯೋಧ ಹನುಮಂತಪ್ಪ ಕೊಪ್ಪದ್ ಅವರಿಗೆ ಭಾರತೀಯ ಸೇನೆ ಮರಣೋತ್ತರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಪ್ಪದ ಪತ್ನಿ ಮಹಾದೇವಿ ಶೌರ್ಯ ಪ್ರಶಸ್ತಿ ಸ್ವೀಕರಿಸಿದರು.
2016ರ ಫೆಬ್ರವರಿಯಲ್ಲಿ ಹಿಮಪಾತದಲ್ಲಿ ಸಿಲುಕಿಕೊಂಡಿದ್ದ ಕೊಪ್ಪದ್, 6 ದಿನಗಳ ಕಾಲ ಹಿಮದ ನಡುವೆಯೇ ಹೋರಾಡಿದ್ದರು. ಧಾರವಾಡದ ಕುಂದಗೋಳದ ಬೆಟದೂರು ಗ್ರಾಮದ ಹನುಮಂಪ್ಪ ಕೊಪ್ಪದ್, ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಲ್ಯಾನ್ಸ್ ನಾಯಕ್ ಆಗಿದ್ದ ಹನುಮಂತಪ್ಪ ಅವರ ಜೀವರಕ್ಷಣೆಗೆ ವೈದ್ಯರು ಹರಸಾಹಸ ನಡೆಸಿದ್ದರೂ ಯಶಸ್ವಿಯಾಗಿರಲಿಲ್ಲ. ಆದರೆ, ಹನುಮಂತಪ್ಪ ಅವರ ಆ ಹೋರಾಟ, ಪ್ರತಿಯೊಬ್ಬನಿಗೂ ಸ್ಫೂರ್ತಿ ಎಂದು ಸೇನಾಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಬಣ್ಣಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.