
ಭೋಪಾಲ್: ತಮ್ಮದೇ ಪಕ್ಷದ ಹಿರಿಯ ಮುಖಂಡನ ಅಣತಿ ಮೇರೆಗೆ ಜಿಲ್ಲಾ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಬಿಜೆಪಿಯ ಶಾಸಕಿಯೊಬ್ಬರು ಮಧ್ಯಪ್ರದೇಶದ ವಿಧಾನಸಭೆಯಲ್ಲೇ ಕಣ್ಣೀರು ಹಾಕಿದ ಘಟನೆ ನಡೆದಿದೆ.
ಮಂಗಳವಾರ ನಡೆದ ವಿಧಾನಸಭೆ ಕಲಾಪದ ಶೂನ್ಯ ಅವಧಿ ವೇಳೆ ಮಾತನಾಡಿದ ಬಿಜೆಪಿ ಶಾಸಕಿ ನೀಲಂ ಅಭಯ್ ಮಿಶ್ರಾ ಅವರು, ರೇವಾ ಜಿಲ್ಲೆಯ ಪೊಲೀಸರು ಸುಳ್ಳು ಪ್ರಕರಣದಲ್ಲಿ ನನ್ನ ಮತ್ತು ನನ್ನ ಕುಟುಂಬ ಸದಸ್ಯರನ್ನು ಸಿಲುಕಿಸಲು ಯತ್ನಿಸುತ್ತಿದ್ದಾರೆ. ಹೀಗಾಗಿ ನಮಗೆ ಭದ್ರತೆ ನೀಡಬೇಕು, ಎಂದು ಕೋರಿದರು. ಅಲ್ಲದೆ, ಬಿಜೆಪಿಯ ಪ್ರಭಾವಿ ನಾಯಕರೊಬ್ಬರ ಮಾತು ಕಟ್ಟಿಕೊಂಡು ರೇವಾ ಎಸ್ಪಿ ತಮ್ಮ ಕುಟುಂಬದ ವಿರುದ್ಧ ಪಕ್ಷಪಾತಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಗಳಗಳನೆ ಅತ್ತರು. ಅಲ್ಲದೆ, ಇದರಿಂದ ಮನಸ್ಸಿಗೆ ತುಂಬಾ ನೋವಾಗಿದ್ದು, ಮುಂದಿನ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿಕೊಂಡರು.
ಈ ವೇಳೆ ಬಿಜೆಪಿ ಶಾಸಕಿಯ ನೆರವಿಗೆ ಬಂದ ಪ್ರತಿಪಕ್ಷ ಕಾಂಗ್ರೆಸ್ ಶಾಸಕರು, ರಾಜ್ಯದಲ್ಲಿ ಆಡಳಿತಾರೂಢ ಶಾಸಕಿಯ ಕಥೆಯೇ ಇಷ್ಟುಅಸಹಾಯಕವಾದರೆ, ಇನ್ನು ಸಾಮಾನ್ಯ ಜನರ ಗತಿಯೇನು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.