ಹಾರ್ದಿಕ್ ಪಟೇಲ್ ಅನಾರೋಗ್ಯ : ಆಸ್ಪತ್ರೆಯಿಂದ ಮನೆಗೆ

Published : Sep 10, 2018, 03:11 PM ISTUpdated : Sep 19, 2018, 09:21 AM IST
ಹಾರ್ದಿಕ್ ಪಟೇಲ್ ಅನಾರೋಗ್ಯ : ಆಸ್ಪತ್ರೆಯಿಂದ ಮನೆಗೆ

ಸಾರಾಂಶ

15 ದಿನಗಳ ಕಾಲ ನಿರಂತರ ಉಪವಾಸ ಸತ್ಯಾಗ್ರಹದ ಮೂಲಕ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಾರ್ದಿಕ್ ಪಾಟೀಲ್ ಅವರನ್ನು ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡಲಾಗಿದೆ. 

ಬೆಂಗಳೂರು :  ಕಳೆದ 15 ದಿನಗಳಿಂದ ನಿರಂತರವಾಗಿ  ಉಪವಾಸ ಸತ್ಯಾಗ್ರಹ ನಡೆಸಿ ಆಸ್ಪತ್ರೆಗೆ ದಾಖಲಾಗಿದ್ದ  ಹಾರ್ದಿಕ್ ಪಟೇಲ್ ಅವರನ್ನು ಇದೀಗ ಡಿಶ್ಚಾರ್ಜ್ ಮಾಡಲಾಗಿದೆ. 
 
ಅಹಮದಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡು ಬಂದಿದ್ದು, ಡಿಶ್ಚಾರ್ಜ್ ಮಾಡಿ ನಿವಾಸಕ್ಕೆ ಕರೆತರಲಾಗಿದೆ.   

ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ಹಾಗೂ  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾರ್ದಿಕ್ ಪಟೇಲ್ ಆಗಸ್ಟ್ 25ರಂದು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. 

ಇದರಿಂದ ಅವರ ವಿವಿಧ ಅಂಗಾಂಗಗಳು ವೈಫಲ್ಯಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಚಿಕಿತ್ಸೆ ನೀಡುತ್ತಿದ್ದ ವೇಳೆಯೂ ಕೂಡ ಅವರು ಆಸ್ಪತ್ರೆಯ ಬೆಡ್ ಮೇಲೆ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದರು. 

ಅಲ್ಲದೇ ಇದೀಗ ಅವರ ಸ್ಥಿತಿ ಕೊಂಚ ಸುಧಾರಿಸಿದ್ದು ಮನೆಗೆ ಕರೆತರಲಾಗಿದೆ. ಆದರೆ ಉಪವಾಸವನ್ನು ನಿವಾಸದಲ್ಲಿಯೇ ಮುಂದುವರಿಸುತ್ತಾರೆ ಎಂದು ಪಾಸ್ ಮುಖಂಡರು ಫೇಸ್ ಬುಕ್ ಲೈವ್ ಮೂಲಕ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ