ಅಗತ್ಯ ಬಿದ್ದರೆ ಟಿಎಂಸಿ ಸೇರ್ಪಡೆ: ಹಾರ್ದಿಕ್‌

By Suvarna Web DeskFirst Published Feb 11, 2018, 9:00 AM IST
Highlights

ಪಾಟಿದಾರ್‌ ಅನಾಮತ್‌ ಆಂದೋಲನ ಸಮಿತಿ ನಾಯಕ ಹಾರ್ದಿಕ್‌ ಪಟೇಲ್‌, ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕೊಲ್ಕತ್ತ: ಪಾಟಿದಾರ್‌ ಅನಾಮತ್‌ ಆಂದೋಲನ ಸಮಿತಿ ನಾಯಕ ಹಾರ್ದಿಕ್‌ ಪಟೇಲ್‌, ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮಾತುಕತೆ ಬಳಿಕ ಪ್ರತಿಕ್ರಿಯೆ ನೀಡಿದ ಹಾರ್ದಿಕ್‌, ಅಲ್ಲದೆ 2019ರ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಘೋಷಿಸಿದ್ದಾರೆ.

ಅಲ್ಲದೆ ಪಕ್ಷ ಸೇರುವಂತೆ ನನಗೆ ಮಮತಾ ಆಹ್ವಾನ ನೀಡಿದ್ದಾರೆ. ಅಗತ್ಯ ಬಿದ್ದಲ್ಲಿ ಟಿಎಂಸಿ ಸೇರಿಕೊಳ್ಳುವೆ ಎಂದು ಹಾರ್ದಿಕ್‌ ಹೇಳಿದ್ದಾರೆ.

click me!