
ಬೆಂಗಳೂರು: ವಿದ್ವತ್ ಮೇಲಿನ ನಲಪಾಡ್ ಹಲ್ಲೆ ಪ್ರಕರಣ ಹಸಿ ಆಗಿರುವಾಗಲೇ ಶಾಸಕ ಎನ್.ಎ.ಹ್ಯಾರಿಸ್ ಅವರ ಬೆಂಬಲಿಗ ಮೋವೀಸ್ ಎಂಬಾತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪ ಕೇಳಿ ಬಂದಿದೆ. ರುದ್ರಪ್ಪ ಗಾರ್ಡನ್ ನಿವಾಸಿ ದೀಲಿಪ್ ಎಂಬುವರು ಹಲ್ಲೆಗೊಳಗಾಗಿದ್ದು, ಈ ಸಂಬಂಧ ವಿವೇಕ್ ನಗರ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಿಲೀಪ್ ಸ್ನೇಹಿತರಿಗೆ ಹ್ಯಾರಿಸ್ ಬೆಂಬಲಿಗ ಎನ್ನಲಾದ ಮೋವೀಸ್ ಹಲ್ಲೆ ನಡೆಸಿದ್ದ. ಇದನ್ನು ದಿಲೀಪ್ ಪ್ರಶ್ನಿಸಿದ್ದಕ್ಕೆ ಅವರ ಮೇಲೂ ಕೂಡ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ದೂರು ದಾಖಲಿಸಲು ಹೋದರೆ ಪೊಲೀಸರಿಗೆ ಮೊದಲು ದೂರು ಪಡೆದಿಲ್ಲ. ದಿಲೀಪ್ ಪೋಷಕರು ಹಾಗೂ ಸಾರ್ವಜನಿಕರು ವಿವೇಕ್ನಗರ ಠಾಣೆ ಎದುರು ಜಮಾಯಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಬಳಿಕ ಪೊಲೀಸರು ದೂರು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಯಾವ ಕಾರಣಕ್ಕೆ ಗಲಾಟೆಯಾಗಿದೆ ಎಂಬುದು ತಿಳಿದಿಲ್ಲ. ಎರಡು ಕಡೆಯಿಂದ ದೂರು-ಪ್ರತಿ ದೂರು ಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.