ಮೇಟಿಯವರ ವರೆಗೆ ಹಲವರು ತಮಗೂ ಹಾಗೂ ತಮ್ಮ ಕರುಳ ಕುಡಿಗಳಿಗೂ ಟಿಕೆಟ್ ಕೇಳುತ್ತಿದ್ದಾರೆ. ಹಾಗಂತ ಕೇಳಿದ ಎಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ. ಒಬ್ಬರಿಗೆ ನೀಡಿ, ಮತ್ತೊಬ್ಬರಿಗೆ ಟಿಕೆಟ್ ತಪ್ಪಿಸಿದರೆ ಅವರು ಬಂಡೆಳುವ ಸಂಭವವೇ ಹೆಚ್ಚು
ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಹಂಚಿಕೆ ಕುರಿತಂತೆ ವೀರಪ್ಪ ಮೊಯ್ಲಿ ಹಾಗೂ ಅವರ ಪುತ್ರ ಹರ್ಷ ಖಾತೆ ಯಿಂದ ಮಾಡಲಾದ ಟ್ವೀಟ್ ಈಗ ಕಾರ್ಕಳ ಟಿಕೆಟ್ ಹಂಚಿಕೆ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.
ಈ ಬಾರಿ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಪಾಲಿಗೆ ಕಬ್ಬಿಣದ ಕಡಲೆಯಾಗಿರುವುದು ದೊಡ್ಡ ಸಂಖ್ಯೆಯಲ್ಲಿ ಹಿರಿಯ ನಾಯಕರು ಹಾಗೂ ಅವರ ಪುತ್ರರಿಗೆ ಟಿಕೆಟ್ ನೀಡುವ ವಿಚಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆರಂಭಗೊಂಡು ಲೈಂಗಿಕ ಹಗರಣದಲ್ಲಿ ಸಿಲುಕಿಕೊಂಡ ಎಚ್.ವೈ. ಮೇಟಿಯವರ ವರೆಗೆ ಹಲವರು ತಮಗೂ ಹಾಗೂ ತಮ್ಮ ಕರುಳ ಕುಡಿಗಳಿಗೂ ಟಿಕೆಟ್ ಕೇಳುತ್ತಿದ್ದಾರೆ. ಹಾಗಂತ ಕೇಳಿದ ಎಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ. ಒಬ್ಬರಿಗೆ ನೀಡಿ, ಮತ್ತೊಬ್ಬರಿಗೆ ಟಿಕೆಟ್ ತಪ್ಪಿಸಿದರೆ ಅವರು ಬಂಡೆಳುವ ಸಂಭವವೇ ಹೆಚ್ಚು. ಹೀಗಾಗಿ ಈ ವಿಚಾರವನ್ನು ಸಂಪೂರ್ಣವಾಗಿ ಹೈಕಮಾಂಡ್ ನಿರ್ಧಾರಕ್ಕೆ ಬಿಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಹೇಳುತ್ತವೆ