ಪ್ರೇಮಿಗಳಾದ ಅಣ್ಣ- ತಂಗಿ: ಮನೆ ಮಂದಿಗೆ ಹೆದರಿ ತೆಗೆದುಕೊಂಡ ನಿರ್ಧಾರ?

Published : Apr 08, 2019, 04:44 PM IST
ಪ್ರೇಮಿಗಳಾದ ಅಣ್ಣ- ತಂಗಿ: ಮನೆ ಮಂದಿಗೆ ಹೆದರಿ ತೆಗೆದುಕೊಂಡ ನಿರ್ಧಾರ?

ಸಾರಾಂಶ

ಪರಸ್ಪರ ಪ್ರೀತಿಯಲ್ಲಿ ಬಿದ್ದ ಅಣ್ಣ-ತಂಗಿ| ಕುಟುಂಬಸ್ಥರ ಭಯದಿಂದ ತೆಗೆದುಕೊಂಡ ನಿರ್ಧಾರ ಮಾತ್ರ ಬೆಚ್ಚಿ ಬೀಳಿಸುವಂತಿದೆ.

ಚಂಡೀಗಡ್[ಏ.08]: ಹರ್ಯಾಣದಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಅಣ್ಣ ತಮ್ಮಂದಿರ ಮಕ್ಕಳು[ಅಣ್ಣ-ತಂಗಿ]ಸಿವಾನಾ ಹಳ್ಳಿಯಲ್ಲಿದ್ದ ದೇವಸ್ಥಾನದ ಕೋಣೆಯೊಂದರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.

ಘಟನೆಯ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾದ ಯುವತಿ 12ನೇ ತರಗತಿ ತೇರ್ಗಡೆ ಹೊಂದಿದ್ದರೆ, ಬಿಎ ವ್ಯಾಸಂಗ ಪೂರ್ಣಗೊಳಿಸಿದ್ದ ಯುವಕ ಹರ್ಯಾಣದ ದಿವ್ಯಾಂಗ ಕ್ರಿಕೆಟ್ ತಂಡದ ಸದಸ್ಯನಾಗಿದ್ದ. ಇವರಿಬ್ಬರೂ ಏಪ್ರಿಲ್ 1ರಿಂದ ಮನೆಯಿಂದ ನಾಪತ್ತೆಯಾಗಿದ್ದರು. ತೀವ್ರ ಹುಡುಕಾಟ ನಡೆಸಿದ್ದ ಪೊಲೀಸರಿಗೆ ಏಪ್ರಿಲ್ 2 ರಂದು ಇಬ್ಬರ ಮೃತದೇಹ ಸಿಕ್ಕಿತ್ತು.

ಸಿವಾನಾ ಹಳ್ಳಿಯ ಹೊರ ವಲಯದಲ್ಲಿ ನಿರ್ಮಿಸಲಾಗಿರುವ ದೇವಸ್ಥಾನದಲ್ಲಿ ಪೂಜೆ ಮಾಡಲು ಬಂದ ಯುವಕ ಬಾಗಿಲು ತೆರೆದಾಗ ಯುವಕ ಯುವತಿ ಇಬ್ಬರೂ ನೇಣಿಗೆ ಶರಣಾಗ ವಿಚಾರ ಬೆಳಕಿಗೆ ಬಂದಿದೆ. ಆ ಕೂಡಲೇ ಆತ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾನೆ.

ಮೃತ ಯುವತಿಯನ್ನು ಸಿವಾನಾ ನಿವಾಸಿ 18 ವರ್ಷದ ಅನಿತಾ ಹಾಗೂ ನೆರೆ ಮನೆಯಾತ 25 ವರ್ಷದ ಕುಲವಂತ್ ಎಂದು ಗುರುತಿಸಲಾಗಿದೆ. ಇಬ್ಬರೂ ಸಹೋದರರ ಮಕ್ಕಳಾಗಿದ್ದ[ಅಣ್ಣ-ತಂಗಿ] ಇವರು ಪರಸ್ಪರ ಪ್ರೀತಿಸುತ್ತಿದ್ದರು. ಏಪ್ರಿಲ್ 1 ರಿಂದ ನಾಪತ್ತೆಯಾಗಿರುವ ಇವರನ್ನು ಹುಡುಕಿ ಕೊಡುವಂತೆ ಕುಟುಂಬ ಸದಸ್ಯರು ಪೊಲೀಸರಿಗೆ ದೂರನ್ನೂ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ