ಆಧಾರ್ ಕಡ್ಡಾಯ ಉಗ್ರರ ಕಟ್ಟಿ ಹಾಕಿತೆ? ಮಮತಾ ಪ್ರಶ್ನೆ

Published : Jul 27, 2018, 09:28 PM IST
ಆಧಾರ್ ಕಡ್ಡಾಯ ಉಗ್ರರ ಕಟ್ಟಿ ಹಾಕಿತೆ? ಮಮತಾ ಪ್ರಶ್ನೆ

ಸಾರಾಂಶ

ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ  ಮಾಡಿರುವ ಮಮತಾ ಬ್ಯಾನರ್ಜಿ ಆಧಾರ್ ವಿಚಾರದಲ್ಲಿ ಮಾತನಾಡಿದ್ದಾರೆ.

ಕೋಲ್ಕತ್ತಾ[ಜು.27] ವಿವಿಧ ಸೇವೆಗಳಿಗೆ ಆಧಾರ್ ಕಡ್ಡಾಯ ಮಾಡಿದ ನಂತರ ಭಯೋತ್ಪಾದನೆ ಕಡಿಮೆಯಾಗಿದೆ, ಉಗ್ರರ ಅಟ್ಟಹಾಸ ನಿಯಂತ್ರಣಕ್ಕೆ ಬಂದಿದೆಯೇ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಕೇಂದ್ರ ಸರಕಾರ ಎಲ್ಲದಕ್ಕೂ ಆಧಾರ್ ಕಡ್ಡಾಯ ಎಂದು ಹೇಳುತ್ತಿದೆ. ಇದು ಉಗ್ರಗಾಮಿಗಳ ಸಂಖ್ಯೆ ಕಡಿಮೆ ಮಾಡಿದೆಯೇ ಎಂದು ಪ್ರಶ್ನಿಸಿರುವ ಅವರು ಈ ರೀತಿ ವೈಯಕ್ತಿಕ ದಾಖಲೆಗಳನ್ನು ಪ್ರತಿಯೊಂದಕ್ಕೂ ಲಿಂಕ್ ಮಾಡುವುದು ಭದ್ರತೆಗೆ ಧಕ್ಕೆ ತರುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಕೇಂದ್ರದ ಎನ್ ಡಿಎ ಒಕ್ಕೂಟದ ವಿರುದ್ಧ ಎಲ್ಲ ಪಕ್ಷಗಳು ಒಂದಾಗಿದ್ದು ಮಹಾಘಟಬಂಧನ ನಿರ್ಮಾಣಕ್ಕೆ ಮುಂದಾಗಿರುವುದು ಹಳೆ ಸುದ್ದಿ. ಅದರ ಜತೆಗೆ ಮಮತಾ ಬ್ಯಾನರ್ಜಿ ಅವರನ್ನು ಮುಂದಿನ ಪ್ರಧಾನಿ ಅಭ್ಯರ್ತಿಯಾಗಿಯೂ ಘೋಷಿಸುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Kamalakar Bhat case: ಕೊ*ಲೆ ದಿನ ಆಗಿದ್ದೇನು? ಐದೇ ನಿಮಿಷದಲ್ಲಿ ನಡೆದ ಘೋರ ಘಟನೆ ಬಗ್ಗೆ ಮೃತ ವಸಂತ್​ ಪತ್ನಿ ರಿವೀಲ್​
12ನೇ ತರಗತಿ ಮಕ್ಕಳ ಉತ್ತರ ಪತ್ರಿಕೆ ಡಿಜಿಟಲಿ ಮೌಲ್ಯಮಾಪನ ಮಾಡಲಿದೆ ಸಿಬಿಎಸ್ಇ