ಬೆಳ್ಳಂಬೆಳಗ್ಗೆ ಹಾಸನದಲ್ಲಿ ಜವರಾಯನ ಅಟ್ಟಹಾಸ :ಸಾವಿನ ಸಂಖ್ಯೆ 10ಕ್ಕೇರಿಕೆ

By Suvarna Web DeskFirst Published Jan 13, 2018, 7:17 AM IST
Highlights

ಹಾಸನದಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಇಲ್ಲಿನ ಶಾಂತಿಗ್ರಾಮದ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಹಾಸನ (ಜ.13) :  ಹಾಸನದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ10ಕ್ಕೇರಿದೆ.

ಚಾಲಕನ ನಿಯಂತ್ರಣ ತಪ್ಪಿ ಐರಾವತ ಬಸ್ ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದಿದ್ದು, ದುರ್ಘಟನೆ ಸಂಭವಿಸಿತ್ತು ಈ ವೇಳೆ 8 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದರು.. 10 ಜನರು ಗಂಭೀರವಾಗಿ ಗಾಯಗೊಂಡಿದ್ದರು.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಐರಾವತ ಬಸ್’ನಲ್ಲಿ ಸುಮಾರು 40ಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎನ್ನಲಾಗಿದೆ.

click me!