ಸಚಿವ ಎಚ್.ಡಿ ರೇವಣ್ಣ ಮಕ್ಕಳಿಗೆ ಶಾಕ್: ಅಕ್ರಮ ಒತ್ತುವರಿಗೆ ಬಿತ್ತು ಬ್ರೇಕ್

Published : Nov 03, 2018, 08:27 PM IST
ಸಚಿವ ಎಚ್.ಡಿ ರೇವಣ್ಣ ಮಕ್ಕಳಿಗೆ ಶಾಕ್: ಅಕ್ರಮ ಒತ್ತುವರಿಗೆ ಬಿತ್ತು ಬ್ರೇಕ್

ಸಾರಾಂಶ

ಸಚಿವ ಹೆಚ್.ಡಿ. ರೇವಣ್ಣ ಅವರ ಪುತ್ರರ ಅಕ್ರಮ ಒತ್ತುವರಿಗೆ ಹಾಸನ ನಗರಸಭೆ ಬ್ರೇಕ್ ಹಾಕಿದೆ. ಏನಿದು? ಇಲ್ಲಿದೆ ವಿವರ.

ಹಾಸನ, (ನ. 03): ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಇಬ್ಬರು ಮಕ್ಕಳಿಗೆ ಹಾಸನ ನಗರಸಭೆ ನೋಟೀಸ್ ಜಾರಿ ಮಾಡಿದೆ. 

ಸಚಿವ ಹೆಚ್.ಡಿ. ರೇವಣ್ಣ ಅವರ ಪುತ್ರರಾದ ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣಗೆ ಸರ್ಕಾರಿ ಜಾಗ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ಕಟ್ಟಡವನ್ನು ತೆರವುಗೊಳಿಸುವಂತೆ ನೋಟಿಸ್ ನೀಡಿದೆ.

ದೇವೇಗೌಡ ಕುಟುಂಬವನ್ನು ಕೋರ್ಟ್‌ಗೆ ಎಳೆಯುತ್ತೇನೆಂದ ಮಾಜಿ ಸಚಿವ

7 ದಿನಗಳ ಒಳಗಾಗಿ ಕಟ್ಟಡ ತೆರವುಗೊಳಿಸುವಂತೆ ನೋಟೀಸ್​ನಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಗರಸಭೆ ವಾರ್ಡ್ ನಂಬರ್ 1ರಲ್ಲಿ ಪ್ರಜ್ವಲ್ ಮತ್ತು ಸೂರಜ್ ರೇವಣ್ಣರಿಗೆ ಸೇರಿದ ಕಟ್ಟಡಗಳು ಅಕ್ರಮವಾಗಿ ತಲೆ ಎತ್ತಿವೆ.

 ಅಕ್ರಮ ರಸ್ತೆ ಒತ್ತುವರಿಗಳಿಂದಾಗಿ ಈ ಭಾಗದಲ್ಲಿ ಅತೀ ಹೆಚ್ಚು ವಾಹನ ದಟ್ಟಣೆ ಇದೆ. ಅಕ್ರಮ ಕಟ್ಟಡ ತೆರವು ಮೂಲಕ ರಸ್ತೆ ಅಗಲೀಕರಣ ಮಾಡಲು ನಗರಸಭೆ ಮುಂದಾಗಿದೆ. 

ಈ ಹಿನ್ನೆಲೆಯಲ್ಲಿ ಹೆದ್ದಾರಿಯಿಂದ 6 ಮೀಟರ್​ನಷ್ಟು ಜಾಗವನ್ನು ತೆರವುಗೊಳಿಸಬೇಕೆಂದು ನಿರ್ದಿಷ್ಟ ಕಟ್ಟಡಗಳ ಮಾಲೀಕರಿಗೆ ಸೂಚನೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!