
ಬೆಂಗಳೂರು(ಆ.22): ರಾಜಧಾನಿ ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬಾರ್ ಮತ್ತು ಪಬ್ಗಳ ಪುನರಾರಂಭಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ನವೀನ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಬಾರ್ಗಳ ಪುನರಾರಂಭಕ್ಕೆ ಅವಕಾಶ ಕೋರಿ, ಬ್ರಿಗೇಡ್ ರಸ್ತೆಯ ಸಿದ್ದಿ ಎಂಟರ್ಪ್ರೈಸಸ್ ಮತ್ತಿತರ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ತೀರ್ಪಿನಿಂದ ಬಾರ್ ಮಾಲೀಕರು ಹಾಗೂ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ಮರುಪರಿಶೀಲಿಸದ ಹಿನ್ನಲೆಯಲ್ಲಿ, ಬಾರ್ಗಳ ಪುನರಾರಂಭಕ್ಕೆ ಅವಕಾಶ ಕೋರಿದ್ದ ಮನವಿಯನ್ನ ಹೈಕೋರ್ಟ್ ತಳ್ಳಿ ಹಾಕಿದೆ. ಈ ಮೂಲಕ ರಾಜಧಾನಿಯ ಹೆದ್ದಾರಿ ಪಬ್ ಅಂಡ್ ಬಾರ್'ಗಳ ಪುನರಾರಂಭದ ಕನಸಿಗೆ ಹಿನ್ನಡೆಯಾದಂತಾಗಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.