
ಬೆಂಗಳೂರು(ಮಾ.14): ಉದ್ಯಮಿಯೊಬ್ಬರ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ನಗರ ಶಾಸಕ ಎನ್.ಎ. ಹ್ಯಾರೀಸ್ ಅವರ ಪುತ್ರ ಮೊಹಮದ್ ನಲಪಾಡ್' ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿಸದೆ. ವಿದ್ವತ್ ಮೇಲೆ ಫೆ.17ರಂದು ನಲಪಾಡ್ ಹಾಗೂ ಆತನ ಗ್ಯಾಂಗ್ ವಿದ್ವತ್ ಮೇಲೆ ಯುಬಿ ಸಿಟಿಯ ಫರ್ಜಿ ಕಫೆಯಲ್ಲಿ ಹಲ್ಲೆ ನಡೆಸಿದ್ದರು. ನಲಪಾಡ್ ಪರ ಖ್ಯಾತ ವಕೀಲ ಸಿ.ವಿ.ನಾಗೇಶ್ ಕುಮಾರ್ ವಾದ ಮಂಡಿಸಿದ್ದರೆ, ವಿದ್ವತ್ ಪರ ಶ್ಯಾಮ್ ಸುಂದರ್ ಸರ್ಕಾರಿ ಅಭಿಯೋಜಕರಾಗಿದ್ದರು. ಕೋರ್ಟ್ ಸಿಸಿ ದೃಶ್ಯಾವಳಿ ಮೇಲೆ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ತನಿಖಾಧಿಕಾರಿಗಳಿಗೆ ಸಿಗದ ವೈದ್ಯಕೀಯ ವರದಿ ನಲಪಾಡ್ ಪರ ವಕೀಲರಿಗೆ ಸಿಕ್ಕಿದ್ದೇಗೆ ಎಂದು ನ್ಯಾಯಮೂರ್ತಿ ಪ್ರಶ್ನಿಸಿದ್ದಾರೆ. 2 ದಿನಗಳ ಹಿಂದಷ್ಟೆ ಎರಡೂ ಕಡೆಯ ವಕೀಲರು ತಮ್ಮ ವಾದ ಮಂಡಿಸಿದ್ದರು. ಸೆಷನ್ಸ್ ಕೋರ್ಟ್'ನಲ್ಲೂ ಜಾಮೀನು ಅರ್ಜಿ ವಜಾಗೊಳಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.