
ನವದೆಹಲಿ: ಧಾರ್ಮಿಕ ಚಿಹ್ನೆಗಳನ್ನು ಹೊಂದಿರುವ ನಾಣ್ಯಗಳನ್ನು ಹಿಂಪಡೆಯಬೇಕೆಂದು ಕೋರಲಾದ ಅರ್ಜಿಯೊಂದನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ನಾಣ್ಯಗಳಲ್ಲಿ ಧಾರ್ಮಿಕ ಚಿಹ್ನೆಗಳಿರುವುದರಿಂದ ದೇಶದ ಜಾತ್ಯಾತೀತ ನೆಲೆಗೆ ಯಾವುದೇ ಧಕ್ಕೆಯಿಲ್ಲ ಎಂದು ಕೋರ್ಟ್ ಹೇಳಿದೆ.
2010 ಮತ್ತು 2013ರಲ್ಲಿ ಬೃಹದೀಶ್ವರ ದೇವಸ್ಥಾನ ಮತ್ತು ಮಾತಾ ವೈಷ್ಣೋದೇವಿ ದೇವಾಲಯದ ಫೋಟೊಗಳನ್ನು ಮುದ್ರಿಸಲಾಗಿರುವ ನಾಣ್ಯಗಳನ್ನು ಹಿಂಪಡೆಯುವಂತೆ ಆರ್ಬಿಐ ಮತ್ತು ಹಣಕಾಸು ಸಚಿವಾಲಯಕ್ಕೆ ನಿರ್ದೇಶಿಸುವಂತೆ ಇಬ್ಬರು ದೆಹಲಿ ನಿವಾಸಿಗಳು ಪಿಐಎಲ್ ಸಲ್ಲಿಸಿದ್ದರು. ಪ್ರಭಾರ ಮುಖ್ಯನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾ. ಸಿ. ಹರಿ ಶಂಕರ್ ನ್ಯಾಯಪೀಠ ಅರ್ಜಿ ನಿರಾಕರಿಸಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.