
ಬೆಂಗಳೂರು(ಮಾ.22): ಉದ್ಯಮಿಯೊಬ್ಬರ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿ ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಇಂದು ಜಾಮೀನು ದೊರೆಯಲಿಲ್ಲ. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಜಾಮೀನು ಅರ್ಜಿಯನ್ನು ಬುಧವಾರಕ್ಕೆ ಕಾಯ್ದಿರಿಸಿದೆ.
ಫೆ.17ರಂದು ಯುಬಿಸಿಟಿಯ ಫರ್ಜಿ ಕಫೆಯಲ್ಲಿ ಕಾಲು ತಗುಲಿದ ವಿಚಾರಕ್ಕಾಗಿ ವಿದ್ವತ್ ಲೋಕನಾಥನ್ ಅವರ ಪುತ್ರ ವಿದ್ವತ್ ಅವರ ಮೇಲೆ ಮೊಹಮದ್ ಹಾಗೂ ಆತನ ಸಹಚರರು ಮನಬಂದಂತೆ ಹಲ್ಲೆ ನಡೆಸಿದ್ದರು. 36 ಗಂಟೆಗಳ ನಂತರ ನಲಪಾಡ್'ನನ್ನು ಬಂಧಿಸಲಾಗಿತ್ತು. ಕೆಲ ದಿನ ಚಿಕಿತ್ಸೆ ಪಡೆದಿದ್ದ ವಿದ್ವತ್ ಚೇತರಿಕೆಯ ನಂತರ ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.