
ಬೆಂಗಳೂರು: ಟೆಕ್ಕಿ ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸುವಂತೆ ಆತನ ತಂದೆ ಮಾಡಿರುವ ಮನವಿ ಕುರಿತು ವಿಚಾರಣೆ ನಡೆಸಲು ಹೈಕೊರ್ಟ್ ತೀರ್ಮಾನಿಸಿದೆ.
ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಅಜಿತಾಬ್ ತಂದೆ ಅಶೋಕ್ ಕುಮಾರ್ ಸಿನ್ಹಾ ಸಲ್ಲಿಸಿದ್ದ ತಕರಾರು ಅರ್ಜಿಯು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠದಲ್ಲಿ ಮಂಗಳವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರಿ ವಕೀಲರು, ಪ್ರಕರಣ ಕುರಿತ ಸಿಐಡಿ ಪೊಲೀ ಸರ ತನಿಖಾ ವರದಿಯನ್ನು ಮುಚ್ಚಿದ ಲಕೋ ಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಈ ವರದಿ ಪರಿಶೀಲಿಸಿದ ನ್ಯಾಯಮೂರ್ತಿ ಗಳು, ತನಿಖಾ ಪ್ರಗತಿಯ ಬಗ್ಗೆ ಅತೃಪ್ತಿ ವ್ಯಕ್ತ ಪಡಿಸಿದರು.
ಇದೇ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಅಜಿತಾಬ್ ನಾಪತ್ತೆಯಾಗಿ ಎಂಟು ತಿಂಗಳು ಕಳೆದಿವೆ. ಆದರೆ, ಪೊಲೀಸರ ತನಿಖೆ ಪ್ರಗತಿಯಾಗಿಲ್ಲ. ಹೀಗಾಗಿ, ಪ್ರಕ ರಣವನ್ನು ಸಿಬಿಐಗೆ ವಹಿಸುವಂತೆ ಕೋರಿದ ರು. ಇದನ್ನು ಪರಿಗಣಿಸಿದ ನ್ಯಾಯ ಮೂರ್ತಿ ಗಳು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸ ಬೇಕೆಂಬ ಅರ್ಜಿದಾರರ ಮನವಿಯ ಕುರಿತಾದ ಅಂಶಗಳ ಮೇಲೆ ವಿಚಾರಣೆ ನಡೆಸುವು ದಾಗಿ ತಿಳಿಸಿದರು. ಆ ಕುರಿತು ವಾದ ಮಂಡಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿದರು. ಅರ್ಜಿ ವಿಚಾರಣೆ ಆ. 2ಕ್ಕೆ ಮುಂದೂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.