ಸಂಸದ ತೇಜಸ್ವಿ ಸೂರ್ಯ ಹೊಗಳಿದ ದೇವೇಗೌಡ!

Published : Sep 23, 2019, 08:53 AM ISTUpdated : Sep 23, 2019, 10:06 AM IST
ಸಂಸದ ತೇಜಸ್ವಿ ಸೂರ್ಯ  ಹೊಗಳಿದ ದೇವೇಗೌಡ!

ಸಾರಾಂಶ

ತೇಜಸ್ವಿ ಸೂರ್ಯ ಅವರ ಬದ್ಧತೆ ಇಷ್ಟವಾಯಿತು| ರಾಜ್ಯದ ಜನರ ಬಗ್ಗೆ ಇರುವ ಕಾಳಜಿ ನನಗೆ ಮೆಚ್ಚುಗೆಯಾಗಿದೆ| ಸಂಸದ ತೇಜಸ್ವಿ ಸೂರ್ಯ  ಹೊಗಳಿದ ದೇವೇಗೌಡ!

ಬೆಂಗಳೂರು[ಸೆ.23]: ಸಂಸದ ತೇಜಸ್ವಿ ಸೂರ್ಯ ಅವರನ್ನು ಹೊಗಳುವ ಮೂಲಕ ದೇವೇಗೌಡ ಅಚ್ಚರಿ ಮೂಡಿಸಿದ್ದಾರೆ.

ತೇಜಸ್ವಿ ಸೂರ್ಯ ಅವರ ಬದ್ಧತೆ ಇಷ್ಟವಾಯಿತು. ಅವರಿಗೆ ರಾಜ್ಯದ ಜನರ ಬಗ್ಗೆ ಇರುವ ಕಾಳಜಿ ನನಗೆ ಮೆಚ್ಚುಗೆಯಾಗಿದೆ ಎಂದರು. ನಾನು ಅವರಿಗೆ ಪ್ರಮಾಣ ಪತ್ರ ಕೊಡುವ ಅಗತ್ಯ ಇಲ್ಲ. ರಾಜ್ಯದ ಜನತೆ ನನಗೆ ಮುಖ್ಯ. ಉದಯೋನ್ಮುಖ ನಾಯಕರಿಗೆ ಇಂತಹ ಭಾವನೆ ಇರಬೇಕಾಗಿರುವುದು ಅಗತ್ಯ. ಪಕ್ಷ ಯಾವುದಾದರೂ ಇರಲಿ, ಒಳ್ಳೆಯ ಕೆಲಸಗಳನ್ನು ಶ್ಲಾಘಿಸಬೇಕು. ಆದರೆ, ಯಡಿಯೂರಪ್ಪ ಅವರಿಗೆ ರಾಜ್ಯದ ಜನರ ಪರವಾಗಿ ಬದ್ಧತೆ ಇಲ್ಲ. ಅವರಿಗೆ ಕುರ್ಚಿಯ ಮೇಲೆ ಚಿಂತೆ ಇದೆ ಎಂದು ಹೇಳಿದರು.

ಕಳೆದೆರಡು ದಿನಗಳ ಹಿಂದೆ ಸಂಸದ ತೇಜಸ್ವಿ ಸೂರ್ಯ ರಾಜ್ಯದ ನೆರೆ ಪರಿಹಾರಕ್ಕೆ ಕೇಂದ್ರದ ಅಗತ್ಯವಿಲ್ಲ, ಪ್ರಧಾನಿ ಮೋದಿ ರಾಜ್ಯಗಳಿಗೆ ಹೆಚ್ಚಿನ ಅನುದಾನ ಸಿಗುವಂತೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, ಅ.24ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು