'ರಾಜ್ಯದಲ್ಲಿ ಜನರು ಕಣ್ಣೀರು ಹಾಕುತ್ತಿದ್ದಾರೆ, ಸಿಎಂ ಕುರ್ಚಿಗಾಗಿ ದೆಹಲಿಗೆ ಹೋಗಿದ್ದಾರೆ'

Published : Sep 23, 2019, 08:42 AM IST
'ರಾಜ್ಯದಲ್ಲಿ ಜನರು ಕಣ್ಣೀರು ಹಾಕುತ್ತಿದ್ದಾರೆ, ಸಿಎಂ ಕುರ್ಚಿಗಾಗಿ ದೆಹಲಿಗೆ ಹೋಗಿದ್ದಾರೆ'

ಸಾರಾಂಶ

ಬಿಎಸ್‌ವೈಗೆ ಕುರ್ಚಿ ಮುಖ್ಯ, ರಾಜ್ಯದ ಜನರಲ್ಲ: ಗೌಡ ಕಿಡಿ| ರಾಜ್ಯದಲ್ಲಿ ಜನರು ಕಣ್ಣೀರು ಹಾಕುತ್ತಿದ್ದಾರೆ, ಸಿಎಂ ಕುರ್ಚಿಗಾಗಿ ದೆಹಲಿಗೆ ಹೋಗಿದ್ದಾರೆ

ಬೆಂಗಳೂರು[ಸೆ.23]: ರಾಜಕಾರಣಿಗೆ ಕುರ್ಚಿ ಮುಖ್ಯವಾದಾಗ ರಾಜ್ಯದ ಜನರು ನೆನಪಿಗೆ ಬರುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕುರ್ಚಿ ಅನಿವಾರ್ಯವಾಗಿದ್ದರಿಂದ ದೆಹಲಿಗೆ ತೆರಳಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಭಾನುವಾರ ನಡೆದ ತುಮಕೂರು ಜಿಲ್ಲೆಯ ಶಾಸಕರ ಮತ್ತು ಮುಖಂಡರ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಕುರ್ಚಿ ಮುಖ್ಯವಾದಾಗ ರಾಜ್ಯದ ಜನತೆ ಮುಖ್ಯವಾಗುವುದಿಲ್ಲ. ಜನತೆ ನೆನಪಿಗೂ ಬರುವುದಿಲ್ಲ. ರಾಜ್ಯದಲ್ಲಿ ಪ್ರವಾಹದಿಂದ ಇಂತಹ ಕೆಟ್ಟದುಸ್ಥಿತಿ ಉಂಟಾಗಿದೆ. ರಾಜ್ಯದಲ್ಲಿ ಜನರು ನಿತ್ಯ ಕಣ್ಣೀರು ಹಾಕುತ್ತಿದ್ದಾರೆ. ಇಂತಹ ವೇಳೆಯಲ್ಲಿ ಯಡಿಯೂರಪ್ಪ ಹೇಗೆ ಕುರ್ಚಿ ಉಳಿಸಿಕೊಳ್ಳಬೇಕು ಎಂಬ ಚಿಂತನೆ ನಡೆಸುತ್ತಿದ್ದಾರೆ. ಹೀಗಾಗಿ ಅವರು ದೆಹಲಿಗೆ ಹೋಗಿದ್ದಾರೆ ಎಂದು ಹರಿಹಾಯ್ದರು.

ಸಂಕಷ್ಟದಲ್ಲಿರುವ ಜನರ ಸಮಸ್ಯೆ ಪರಿಹಾರಕ್ಕೆ ಅವರು ಗಮನ ಹರಿಸುತ್ತಿಲ್ಲ. ಬದಲಿಗೆ ಹೈಕಮಾಂಡ್‌ ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ. ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಕುರ್ಚಿಯ ಅಭದ್ರತೆ ಕಾಡಿದ ಕಾರಣಕ್ಕಾಗಿ ವರಿಷ್ಠರನ್ನು ಭೇಟಿ ಮಾಡಲು ಹೋಗಿದ್ದಾರೆ. ಅನರ್ಹಗೊಂಡಿರುವ ಶಾಸಕರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದ ಅವರು, ಹೈಕೋರ್ಟ್‌ ಆದೇಶವಿದ್ದರೂ ಕಾಂಗ್ರೆಸ್‌ ಸ್ನೇಹಿತರ ತೃಪ್ತಿಗೋಸ್ಕರ ಮಂಡ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಒಬ್ಬರನ್ನು ಅಮಾನತು ಮಾಡಲಾಗಿದೆ.

ಬೆಳಗ್ಗೆ ಕಾಂಗ್ರೆಸ್‌, ಮಧ್ಯಾಹ್ನ ಬಿಜೆಪಿಗೆ ಹೋಗುವವರು ಮಂಡ್ಯದಲ್ಲಿ ತುಂಬಾ ಜನ ಇದ್ದಾರೆ. ಅವರ ತೃಪ್ತಿಗಾಗಿ ಅಮಾನತುಗೊಳಿಸಿದ್ದಾರೆ. ಯಡಿಯೂರಪ್ಪ ಅವರಿಗೆ ಈ ವಿಚಾರವಾಗಿ ಧನ್ಯವಾದ ಹೇಳಬೇಕು ಎಂದು ಅನರ್ಹ ಶಾಸಕ ನಾರಾಯಣಗೌಡ ಮತ್ತು ಮಾಜಿ ಶಾಸಕ ಚಲುವರಾಯಸ್ವಾಮಿ ಹೆಸರು ಪ್ರಸ್ತಾಪಿಸದೆ ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?