12 ವರ್ಷಗಳ ನಂತರ ಗುರು - ಶಿಷ್ಯರ ಸಮಾಗಮ : ಬಿಜೆಪಿ ವಿರುದ್ಧ ವಾಗ್ದಾಳಿ

Oct 20, 2018, 4:20 PM IST

ರಾಜ್ಯ ರಾಜಕಾರಣದಲ್ಲಿ ತದ್ವಿರುದ್ಧ ದಿಕ್ಕಿನಲ್ಲಿದ್ದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12 ವರ್ಷಗಳ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಒಂದೇ ವೇದಿಕೆಗೆ ಬರುವ ಮೂಲಕ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಗಮನವಿಟ್ಟುಕೊಂಡು ನಾವೆಲ್ಲಾ ಹಳೆಯದನ್ನು ಮರೆತು ಒಂದಾಗಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು. ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ, ಮೋದಿ ಪ್ರಧಾನಿ ಆದ ಮೇಲೆ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಜನಸಾಮಾನ್ಯರಿಗೆ ನೀಡಿದ ಭರವಸೆಗಳು ಹುಸಿಯಾಗಿದೆ. ಜನಸಾಮಾನ್ಯರ ಬದುಕು, ರೈತರ ಬದುಕು ದುಸ್ಥರವಾಗಿದೆ. ಜನರ ಕಷ್ಟಗಳನ್ನು ಆಲಿಸುವ ಕೆಲಸವನ್ನು ಮೋದಿ ಮಾಡಿಲ್ಲ ಎಂದರು. ನಾವು ಕಾಯಾ, ವಾಚಾ, ಮನಸಾ ಕೆಲಸ ಮಾಡುತ್ತಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಸ್ಥಾನಗಳನ್ನೂ ಹೊಂದಾಣಿಕೆಯಿಂದ ಗೆಲ್ಲಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.