
ಬೆಂಗಳೂರು (ಡಿ.30): ಅಭಿವೃದ್ಧಿ ಮಾಡಿದ್ದೇನೆ ಅಂತ ಹೇಳುವ ಭರದಲ್ಲಿ ಹಿಂದಿನವರು ಸಾಧನೆ ಮಾಡಿಲ್ಲ ಎಂದು ಸಿಎಂ ಹೇಳಿಕೆ ನೀಡಿದ್ದಾರೆ. ಈ ವೇಳೆ ನನ್ನ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್’ಡಿ ದೇವೇಗೌಡ ಹೇಳಿದ್ದಾರೆ.
ಬೇರೆಯವರ ಬಗ್ಗೆ ಮಾತನಾಡುವಾಗ ಭಾಷೆಯಲ್ಲಿ ಹಿಡಿತ ಇರಬೇಕು. ನಾನು ಮಾತನಾಡಬಹುದು ಆದ್ರೆ ಈಗ ಬೇಡ. ಆದ್ರೆ ನನ್ನ ಮಾತು ಈಗ ಆರಂಭ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಗರಂ ಆಗಿದ್ದಾರೆ. ಸಾರ್ವಜನಿಕರ ಹಣದಲ್ಲಿ ಸಮಾವೇಶ ಮಾಡಲಾಗುತ್ತಿದೆ.
ನವಕರ್ನಾಟಕ ನಿರ್ಮಾಣ ಮಾಡಲಿಕ್ಕೆ ಇವರೊಬ್ಬರೇ ಹುಟ್ಟಿರೋದು. ನಿಜಲಿಂಗಪ್ಪ , ದೇವರಾಜ ಅರಸು, ಸೇರಿದಂತೆ ಎಲ್ಲರು ಆಡಳಿತ ನಡೆಸಿದ್ದಾರೆ. ಇವರೊಬ್ಬರೇನಾ ಆಡಳಿತ ಮಾಡಿದ್ದು. ದೇವೇಗೌಡರ ಬಗ್ಗೆ ಮಾತನಾಡುವಾಗ ಇತಿಹಾಸ ತಿಳಿದು ಮಾತನಾಡಬೇಕು. ಸಿದ್ದರಾಮಯ್ಯ ಬಿರುಸಿನ ಮಾತುಗಳನ್ನು ಕಡಿಮೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೇವೇಗೌಡ ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.