
ನವದೆಹಲಿ[ಜ.01] ರಾಜ್ಯದ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಪಾರದರ್ಶಕ ರೀತಿಯಲ್ಲಿ 60 ಸಾವಿರ ರೈತರ ಸಾಲ ಮನ್ನಾ ಮಾಡಿದೆ. ಪ್ರಧಾನಿ ಅವರು ಇದನ್ನು ವ್ಯಂಗ್ಯವಾಗಿ ಟೀಕಿಸುತ್ತಿರುವುದು ಸರಿಯಲ್ಲ. ನಾನು ಅವರಿಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಲಾರೆ ಎಂದು ದೇವೇಗೌಡರು ಹೇಳಿದ್ದಾರೆ.
"
ನವದೆಹಲಿಯಲ್ಲಿ ಮಾತನಾಡಿದ ದೇವೇಗೌಡರು, ಸಿದ್ದರಾಮಯ್ಯ ಸರ್ಕಾರ ಘೋಷಿಸಿದ್ದ 6500 ಕೋಟಿ ಮತ್ತು ಕುಮಾರಸ್ವಾಮಿ ಸರ್ಕಾರದ 3500 ಕೋಟಿ ಸೇರಿ ಒಟ್ಟು 10 ಸಾವಿರ ಕೋಟಿ ರೂ. ಅಪೇಕ್ಸ್ ಬ್ಯಾಂಕ್ ಗೆ ಸಾಲ ಮನ್ನಾ ಆಗಿದೆ ಎಂದರು.
ದೋಸ್ತಿ ಸರ್ಕಾರದ ಬಗ್ಗೆ ದೇವೇಗೌಡರ ಎಚ್ಚರಿಕೆ ಸಂದೇಶ
ಒಟ್ಟಿನಲ್ಲಿ ರಾಜ್ಯ ಸರಲಕಾರ ನೀಡಿದ್ದ ಸಾಲ ಮನ್ನಾ ಕುರಿತಾಗಿ ಪ್ರಧಾನಿ ಮಾತಾಡಿದ್ದಕ್ಕೆ ದೇವೇಗೌಡರು ತಮ್ಮದೆ ಶೈಲಿಯ ಉತ್ತರ ನೀಡಿದ್ದಾರೆ. ಕೇಂದ್ರ ಸರಕಾರ ಸಹ ವಾಣಿಜ್ಯ ಬ್ಯಾಂಕ್ಗಳಲ್ಲಿರುವ ಸಾಲ ಮನ್ನಾ ಸಂಬಂಧ ಮಾಹಿತಿ ಕಲೆಹಾಕುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.