
ಬೆಂಗಳೂರು : ಕರ್ನಾಟಕದ ಪ್ರತಿನಿಧಿಗಳಲ್ಲದೆ ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಇದನ್ನು ಪ್ರತಿಭಟಿಸಿ ಶರತ್ತು ಪತ್ರದ ಜೊತೆಗೆ ರಾಜ್ಯದ ಇಬ್ಬರು ಪ್ರತಿನಿಧಿಗಳನ್ನು ಶೀಘ್ರವೇ ಕಳಿಸಲಾಗುವುದು ಎಂದಿದ್ದಾರೆ.
ಶ್ರವಣಬೆಳಗೊಳದಲ್ಲಿ ಭಾನು ವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಥ ನಿರ್ಬಂಧಗಳಿಗೆ ನನ್ನ ವಿರೋಧ ವಿದ್ದು, ಸಂಬಂಧಪಟ್ಟವರಿಗೆ ಈಗಾಗಲೇ ಮನವರಿಕೆ ಮಾಡಿದ್ದೇನೆ ಎಂದು ಹೇಳಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ನಂತರ ಪ್ರತಿ 10 ದಿನಕ್ಕೊಮ್ಮೆ ನೀರು ಅಳತೆ ಮಾಡು ತ್ತಾರೆ.
ಬೆಳೆ ಮತ್ತು ಇತರೆ ಬಳಕೆ ನೀರನ್ನೂ ಅಳತೆ ಮಾಡಲಾಗುತ್ತದೆ. ಇದಕ್ಕೆ ನಮ್ಮ ವಿರೋಧವಿದ್ದು ಮುಖ್ಯಮಂತ್ರಿ ಮೂಲಕ ಪ್ರಧಾನಿ ಮೋದಿ ಅವರಿಗೂ ರಾಜ್ಯದ ನಿರ್ಧಾರವನ್ನು ಮನವರಿಕೆ ಮಾಡಲಾಗಿದೆ. ಶೀಘ್ರವೇ ನಮ್ಮ ನಿಲುವಿನ ಬಗ್ಗೆ ಶರತ್ತು ಪತ್ರ ಸಿದ್ಧಪಡಿಸಿ ಅದರೊಂದಿಗೆ ಇಬ್ಬರು ಪ್ರತಿನಿಧಿಗಳನ್ನು ಕಳಿಸಿಕೊಡಲಾಗುವುದು ಎಂದರು. ಒಪ್ಪಂದದ ಪ್ರಕಾರ ತಮಿಳುನಾಡಿಗೆ ೧೭೦ ಟಿಎಂಸಿ ನೀರು ಹರಿಸಬೇಕು. ಆದರೆ ಮಳೆಗಾಲದಲ್ಲಿ ಹರಿಯುವ ಹೆಚ್ಚುವರಿ ನೀರನ್ನು ಯಾರೂ ಹಿಡಿಯಲಾಗುವುದಿಲ್ಲ. ಈ ಎಲ್ಲಾ ಅಂಶಗಳು ಷರತ್ತು ಪತ್ರದಲ್ಲಿ ಇರಲಿವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.