ಬಸ್ ನೀರು ಹಾಕಿ ಓಡಿಸಲು ಆಗುತ್ತಾ..?

Published : Sep 10, 2018, 08:11 AM ISTUpdated : Sep 19, 2018, 09:17 AM IST
ಬಸ್ ನೀರು ಹಾಕಿ ಓಡಿಸಲು ಆಗುತ್ತಾ..?

ಸಾರಾಂಶ

ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಗೌರಿ ಗಣೇಶ ಹಬ್ಬದ ಬಳಿಕ ಕೆಎಸ್‌ಆರ್‌ಟಿಸಿ ಬಸ್ ದರ ಏರಿಕೆ ಮಾಡಲು ನಿರ್ಧಾರ ಮಾಡಿದ್ದು, ಇದನ್ನು ಜೆಡಿಎಸ್ ಮುಖಂಡ ಎಚ್.ಡಿ ದೇವೇಗೌಡ ಸಮರ್ಥಸಿಕೊಂಡಿದ್ದಾರೆ. 

ಮಂಡ್ಯ: ಸಾರಿಗೆ ಸಂಸ್ಥೆಯ ಬಸ್ ದರ ಏರಿಕೆ ನಿರ್ಧಾರವನ್ನು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಸಮರ್ಥಿಸಿ ಕೊಂಡಿದ್ದಾರೆ. ‘‘ಡೀಸೆಲ್ ದರ ಇದೇ ರೀತಿ ಹೆಚ್ಚಾಗುತ್ತಿದ್ದರೆ ಬಸ್ ಅನ್ನು ನೀರು ಹಾಕಿ ಓಡಿಸಲು ಆಗುತ್ತೇನ್ರೀ’’ ಎಂದು ಅವರು ಪ್ರಶ್ನಿಸಿದ್ದಾರೆ. 

ಇಲ್ಲಿನ ಬೆಳ್ಳೂರು ಕ್ರಾಸ್‌ನಲ್ಲಿ ಭಾನುವಾರ ಸುದ್ದಿಗಾರ ರೊಂದಿಗೆ ಮಾತನಾಡಿದರು. ಬಸ್ ಪ್ರಯಾಣ ದರವನ್ನು ಸುಖಾ ಸುಮ್ಮನೆ ಏರಿಕೆ ಮಾಡುತ್ತಿಲ್ಲ. ಕಾರಣ ಕೊಟ್ಟು ದರ ಏರಿಕೆ ಮಾಡುತ್ತಿದ್ದಾರೆ. ಪೆಟ್ರೋಲ್ ಡಿಸೇಲ್ ದರ ತುಟ್ಟಿಯಾಗಿದೆ. ಸದ್ಯಕ್ಕೆ ದರ ಇಳಿಯುವ ಲಕ್ಷಣಗಳೇ ಕಾಣುತ್ತಿಲ್ಲ. ಹೀಗಾಗಿ ಬಸ್ ದರ ಏರಿಕೆ ಮಾಡುವುದರಲ್ಲಿ ತಪ್ಪಿಲ್ಲ ಎಂದರು.

ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಗೌರಿ ಗಣೇಶ ಹಬ್ಬದ ಬಳಿಕ ಕೆಎಸ್‌ಆರ್‌ಟಿಸಿ ಬಸ್ ದರ ಏರಿಕೆ ಬಿಸಿಯೂ ತಟ್ಟ ಲಿದೆ. ಮುಂದಿನ ವಾರ ಕೆಎಸ್‌ಆರ್ ಟಿಸಿ ಬಸ್ ಪ್ರಯಾ ಣ ದರವನ್ನು ಶೇ. 18ರಷ್ಟು ಹೆಚ್ಚಿಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?
ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?