ದೇವೇಗೌಡ ಏಕತಾ ಪ್ರತಿಮೆ ಸಂದರ್ಶನಕ್ಕೆ ಪ್ರಧಾನಿ ಹರ್ಷ!

Published : Oct 07, 2019, 12:02 PM IST
ದೇವೇಗೌಡ ಏಕತಾ ಪ್ರತಿಮೆ ಸಂದರ್ಶನಕ್ಕೆ ಪ್ರಧಾನಿ ಹರ್ಷ!

ಸಾರಾಂಶ

ದೇವೇಗೌಡ ಏಕತಾ ಪ್ರತಿಮೆ ಸಂದರ್ಶನಕ್ಕೆ ಪ್ರಧಾನಿ ಹರ್ಷ!|  ಶನಿವಾರ ಗುಜರಾತ್‌ನ ಕೆವಾಡಿಯಾಗೆ ಭೇಟಿ ನೀಡಿ, ಇಲ್ಲಿನ ಸರೋವರದ ಅಭಿಮುಖವಾಗಿ ನಿರ್ಮಿಸಿರುವ ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಪ್ರತಿಮೆ ವೀಕ್ಷಿಸಿದ್ದ ಗೌಡರು

ನವದೆಹಲಿ[ಅ.07]: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ವಿಶ್ವದ ಅತೀ ಎತ್ತರದ ಸರ್ದಾರ್‌ ವಲ್ಲಭಾಯ್‌ ಪಟೇಲ್‌ ಏಕತಾ ಪ್ರತಿಮೆ ಸಂದರ್ಶಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ, ಮಾಜಿ ಪ್ರಧಾನಿ ದೇವೇಗೌಡಜಿ ಅವರು ಏಕಾತಾ ಪ್ರತಿಮೆ ಸಂದರ್ಶಿಸಿದ್ದನ್ನು ನೋಡಿ ಸಂತೋಷವಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

ವಿಶ್ವದ ಅತಿದೊಡ್ಡ ಪಟೇಲರ ಪ್ರತಿಮೆ ವೀಕ್ಷಿಸಿದ ದೇವೇಗೌಡ

ಮಾಜಿ ಪ್ರಧಾನಿ ದೇವೇಗೌಡ ಅವರು ಶನಿವಾರ ಗುಜರಾತ್‌ನ ಕೆವಾಡಿಯಾಗೆ ಭೇಟಿ ನೀಡಿ, ಇಲ್ಲಿನ ಸರೋವರದ ಅಭಿಮುಖವಾಗಿ ನಿರ್ಮಿಸಿರುವ ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರ ಬೃಹತ್‌ ಪ್ರತಿಮೆ ವೀಕ್ಷಿಸಿದ್ದರು. ಬಳಿಕ ತಮ್ಮ ಭೇಟಿಯ ಚಿತ್ರಗಳನ್ನು ಟ್ವೀಟರ್‌ ಮೂಲಕ ಹಂಚಿಕೊಂಡಿದ್ದರು.

182 ಮೀಟರ್‌ ಎತ್ತರದ ಪ್ರತಿಮೆಯನ್ನು 20,000 ಚದುರ ಮೀಟರ್‌ ವಿಸ್ತೀರ್ಣ ಪ್ರದೇಶದಲ್ಲಿ ಪ್ರತಿಷ್ಠಾಪಿಸಲಾಗಿದೆ. ಕಳೆದ ವರ್ಷ ಪಟೇಲರ 143ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದರು. ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಇದೂ ಒಂದಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!