ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ, ಸಿಂಗಾಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಗೆ ದಾಖಲು

Published : Aug 11, 2017, 01:32 PM ISTUpdated : Apr 11, 2018, 12:40 PM IST
ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ, ಸಿಂಗಾಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಗೆ ದಾಖಲು

ಸಾರಾಂಶ

ಅನಾರೋಗ್ಯದಿಂದ ಬಳಲುತ್ತಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ಡಿ. ಕುಮಾರಸ್ವಾಮಿ, ಸಿಂಗಾಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು(ಆ.11): ಅನಾರೋಗ್ಯದಿಂದ ಬಳಲುತ್ತಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ಡಿ. ಕುಮಾರಸ್ವಾಮಿ, ಸಿಂಗಾಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಕೆಮ್ಮು ಮತ್ತು ಕಫ‌ದ ಸಮಸ್ಯೆಯಿಂದ ಬಳಲುತ್ತಿದ್ದ ಕುಮಾರಸ್ವಾಮಿ ಧರ್ಮಸ್ಥಳದ ಉಜಿರೆಯಲ್ಲಿ  ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫ‌ಲಕಾಣದ ಹಿನ್ನಲೆಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಅಂತ ಹೇಳಲಾಗ್ತಿದೆ.

ಉತ್ತರ ಕರ್ನಾಟಕ ಪ್ರವಾಸದ ವೇಳೆ ಅಭಿಮಾನಿಗಳು ಸಿಡಿಸಿದ ಪಟಾಕಿ ಹೊಗೆ ಸೇವನೆಯಿಂದ ಕೆಮ್ಮು ಮತ್ತು ಕಫ‌ ಸಮಸ್ಯೆ ಕಾಣಿಸಿಕೊಂಡಿದೆ. ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಹೇಳಲಾಗಿದೆ. ಹತ್ತಿರದ ಸಂಬಂಧಿ, ಮೈಸೂರು ವಿವಿ ಮಾಜಿ ಕುಲಪತಿ ರಂಗಪ್ಪ ಅವರು ಕುಮಾರ ಸ್ವಾಮಿ ಅವರೊಂದಿಗೆ ಸಿಂಗಾಪುರಕ್ಕೆ ತೆರಳಿದ್ದು, ಭಾನುವಾರ ವಾಪಸಾಗುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾತ್ರಿ ಕಣ್ಣೇ ಕಾಣೊಲ್ಲವೆಂದು ಹಗಲಿನಲ್ಲಿಯೇ ಕಿರುತೆರೆ ನಟ ಪ್ರವೀಣ್ ಮನೆಗೆ ಕನ್ನ ಹಾಕಿದ ಇರುಳು ಕುರುಡ!
ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ