
ರಾಮನಗರ (ಸೆ.20) : ಮತ್ತೊಮ್ಮೆ ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಾಸಗಿ ಜೀವನದ ಬಗ್ಗೆ ಮಾತನಾಡಿದ್ದಾರೆ.
ರಾಮನಗರದ ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ ಸಿಎಂ ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಅನುಮಾನಾಸ್ಪದವಾಗಿ ಸಿಎಂ ಪತ್ನಿ ಸಾವಾಗಿತ್ತು. ಒಂದು ಅಡಿ ಇರುವ ನೀರಿನ ಸಂಪಿಗೆ ಬಿದ್ದು ಸಾವನ್ನಪ್ಪಿದ್ದು, ಇದು ಅನುಮಾನಾಸ್ಪದ ಸಾವಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ನನಗೆ ಬಿಡದಿಯಲ್ಲಿ ಕೃಷಿ ಭೂಮಿ ಇದೆ. ನನಗೆ ರಾಜಕೀಯ ಅವಶ್ಯಕತೆ ಇಲ್ಲ. ಜನರಿಗಾಗಿ ಇನ್ನೂ ನಾನು ರಾಜಕೀಯದಲ್ಲಿ ಇದ್ದೇನೆ ಎಂದು ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
ರಾಜಕೀಯದಿಂದ ಬೇಸತ್ತು ಹೋಗಿದ್ದೇನೆ. ನಾನು ಯಾವುದೇ ಒಂದು ಅಕ್ರಮ ಮಾಡಿಲ್ಲ. ನನ್ನ ಬಳಿ ಯಾವ ಸಿಬಿಐ, ಐಟಿ, ಇಡಿಯವರು ಬೇಕಾದರೂ ಬರಲಿ ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.