ಹಿಮಾಚಲ, ಗುಜರಾತ್ ಖರ್ಚಿಗೆ ರಾಜ್ಯದಲ್ಲಿ  ಲೂಟಿ

Published : Oct 18, 2017, 04:22 PM ISTUpdated : Apr 11, 2018, 01:09 PM IST
ಹಿಮಾಚಲ, ಗುಜರಾತ್ ಖರ್ಚಿಗೆ ರಾಜ್ಯದಲ್ಲಿ  ಲೂಟಿ

ಸಾರಾಂಶ

ಉತ್ತರದ ರಾಜ್ಯಗಳ ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ | ಕಾಂಗ್ರೆಸ್‌ಗೆ ಕರ್ನಾಟಕ ಹುಲ್ಲುಗಾವಲಿದ್ದಂತೆ: ಎಚ್‌ಡಿಕೆ ವಾಗ್ದಾಳಿ

ಬೆಂಗಳೂರು: ಮುಂದಿನ ಹಿಮಾಚಲ ಪ್ರದೇಶ, ಗುಜರಾತ್ ಚುನಾವಣೆಗೆ ಹಣ ಹೊಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಿಂದ ಹಣ ಲೂಟಿ ಮಾಡುತ್ತಿದ್ದು, ಕರ್ನಾಟಕ ಇವರ ಪಾಲಿಗೆ ಹುಲ್ಲುಗಾವಲಿನಂತಾಗಿದೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಜೆ.ಪಿ.ನಗರದಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಅಭಿವೃದ್ಧಿ ಹೆಸರಲ್ಲಿ ರಾಜ್ಯ ಸರ್ಕಾರವು ಬೊಕ್ಕಸವನ್ನು ಖಾಲಿ ಮಾಡಿದೆ ಎಂದು ಆಪಾದಿಸಿದರು.

ರಾಜಕಾಲುವೆ ಹೂಳೆತ್ತಲು ನಿಗದಿಪಡಿಸಿದ ದರಕ್ಕಿಂತ ಶೇ.22ಕ್ಕಿಂತ ಹೆಚ್ಚಿನ ದರಕ್ಕೆ ಕಾಮಗಾರಿ ನೀಡಲಾಗಿದೆ. ಹೊಳೆತ್ತುವ ಕಾಮಗಾರಿಯನ್ನು ಆರು ಪ್ಯಾಕೇಜ್ ಮಾಡಿ ಅದರ ಹಣವನ್ನು ಉತ್ತರ ಪ್ರದೇಶದ ಚುನಾವಣಾ ಖರ್ಚಿಗೆ ವರ್ಗಾವಣೆ ಮಾಡಿದ್ದಾರೆ. ಇದೀಗ ಟೆಂಡರ್ ಶ್ಯೂರ್ ಸೇರಿದಂತೆ ಇತರೆ ಕಾರ್ಯಗಳ ಹೆಸರಲ್ಲಿ ಲೂಟಿ ಮಾಡಲಾಗುತ್ತಿದೆ. ಹಿಮಾಚಲ ಪ್ರದೇಶ, ಗುಜರಾತ್ ಚುನಾವಣೆಗೆ ಹಣ ಹೊಂದಿಸಲು ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದೆ. ಕಾಂಗ್ರೆಸ್ ಪಾಲಿಗೆ ಕರ್ನಾಟಕ ಹುಲ್ಲುಗಾವಲು ಆಗಿದೆ ಎಂದು ಕಿಡಿ ಕಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಎಚ್.ವಿಶ್ವನಾಥ್, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಇದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ