
ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಸೇರಿದಂತೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ನನ್ನ ಕರ್ಮ
ಭೂಮಿಯಾಗಿದ್ದು ಕಾರ್ಯಕರ್ತರ ಒತ್ತಡ, ಬಯಕೆಯಂತೆ ಮತ್ತೊಂದು ಕಡೆ ಕಣಕ್ಕಿಳಿಯುತ್ತೇನೆ ಎಂದು ತಿಳಿಸಿದರು. ನಮಗೆ ಪ್ರತಿಯೊಂದು ಕ್ಷೇತ್ರವೂ ಸೂಕ್ಷ್ಮವಾಗಿದೆ. ಪ್ರತಿಯೊಂದು ಕ್ಷೇತ್ರವನ್ನು ಗೆಲ್ಲಬೇಕು. ಉತ್ತರ ಕರ್ನಾಟಕದ ಬದಲು ಇದೇ ಭಾಗದಲ್ಲಿ ಸ್ಪರ್ಧಿಸುತ್ತೇನೆ ಎಂದರು. ಏಪ್ರಿಲ್ ಮೊದಲ ವಾರದಲ್ಲಿ 2ನೇ ಪಟ್ಟಿ ಬಿಡುಗಡೆಗೊಳಿಸುವುದಾಗಿ ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.