
ಬೆಂಗಳೂರು : ಈ ಶತಮಾನದ ಅತಿ ದೀರ್ಘ ಚಂದ್ರಗ್ರಹಣ ರಾಜ್ಯ ರಾಜಕೀಯದ ಮೇಲೂ ಪರಿಣಾಮ ಬೀರಲಿದ್ದು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕುರ್ಚಿ ಅಲುಗಾಡುವ ಅಥವಾ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ.
ಈ ವಿಶೇಷ ಗ್ರಹಣದ ಬಗ್ಗೆ ಶುಕ್ರವಾರ ಮಾತನಾಡಿರುವ ಮಡಿಕೇರಿ ಶ್ರೀ ವಿಜಯ ವಿನಾಯಕ ದೇವಾಲಯದ ಅರ್ಚಕರೂ ಹಾಗೂ ಜ್ಯೋತಿಷಿಗಳಾದ ಕೃಷ್ಣ ಉಪಾಧ್ಯ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕಂಟಕ ಕಾದಿದೆ ಎಂದು ಎಚ್ಚರಿಸಿದ್ದಾರೆ. ಈ ಗ್ರಹಣವು ದೇಶದ ಆರ್ಥಿಕ, ರಾಜಕೀಯ ವ್ಯವಸ್ಥೆ ಮೇಲೆ ಪರಿಣಾಮ ಬೀಳುತ್ತದೆ. ಹಾಗೆಯೇ ಬೆಳೆಗಳ ಮೇಲೆ ಕೂಡಾ ಇದರ ಪರಿಣಾಮ ಉಂಟಾಗಲಿದೆ.
ಅಲ್ಲದೆ, ರಾಜ್ಯದ ದೊರೆಯೊಬ್ಬರು ಭಾಗಮಂಡಲವನ್ನು ದಾಟಿ ತಲಕಾವೇರಿಗೆ ಭೇಟಿ ನೀಡಿದ್ದು ಒಳ್ಳೆಯ ಲಕ್ಷಣವಲ್ಲ. ಇದರಿಂದ ಅಂಥವರಲ್ಲಿ ಆರೋಗ್ಯ ಸಮಸ್ಯೆ ಕಾಡುವ ಅಪಾಯವಿದೆ. ಜತೆಗೆ, ರಾಜಕೀಯವಾಗಿ ಅಧಿಕಾರ ಕಳೆದುಕೊಳ್ಳುವ ಸಂಭವವಿದೆ ಎಂದು ಕೃಷ್ಣ ಉಪಾಧ್ಯ ಅವರು ನುಡಿದಿದ್ದಾರೆ. ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದು ಸ್ವಾಗತಾರ್ಹ. ಆದರೆ ಅವರು ಭಾಗಮಂಡಲವನ್ನು ದಾಟಿ ತಲಕಾವೇರಿಗೆ ಭೇಟಿ ನೀಡಿರುವುದು ಅವರ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಕೊಡಗಿನ ಜನ ತಮ್ಮ ಪಿತೃಗಳಿಗೆ ಪಿಂಡ ಪ್ರದಾನ ಮಾಡುವ ಸ್ಥಳ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.