ಮೈತ್ರಿ ಸರ್ಕಾರ ಪತನ; ರಾಜಕೀಯ ನಿವೃತ್ತಿ ಪಡೆಯಲು ಎಚ್‌ಡಿಕೆ ನಿರ್ಧಾರ?

Published : Aug 04, 2019, 09:21 AM IST
ಮೈತ್ರಿ ಸರ್ಕಾರ ಪತನ; ರಾಜಕೀಯ ನಿವೃತ್ತಿ ಪಡೆಯಲು ಎಚ್‌ಡಿಕೆ ನಿರ್ಧಾರ?

ಸಾರಾಂಶ

ಎಚ್‌ಡಿಕೆ ರಾಜಕೀಯ ನಿವೃತ್ತಿ ಇಂಗಿತ |  ಪ್ರಸಕ್ತ ರಾಜಕೀಯ ವಿದ್ಯಮಾನ ಕುರಿತು ಬೇಸರ ವ್ಯಕ್ತಪಡಿಸಿದ ಮಾಜಿ ಸಿಎಂ |  ಈಗ ಬರೀ ದ್ವೇಷ, ಕುತಂತ್ರ, ಜಾತಿ ಆಧರಿತ ರಾಜಕಾರಣ ನಡೆಯುತ್ತಿದೆ |  ಇಂಥ ಸ್ಥಿತಿಯಲ್ಲಿ ರಾಜಕೀಯದಿಂದಲೇ ಹಿಂದೆಸರಿಯಬೇಕೆಂದಿದ್ದೇನೆ ಎಂದ ಎಚ್‌ಡಿಕೆ

ಹಾಸನ (ಆ. 04): ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜಕೀಯ ನಿವೃತ್ತಿಯ ಇಂಗಿತ ವ್ಯಕ್ತಪಡಿಸಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳಿಂದ ಬೇಸತ್ತಿರುವುದಾಗಿ ತಿಳಿಸಿರುವ ಅವರು, ಇಂಥ ವ್ಯವಸ್ಥೆಯಿಂದ ನಾನು ಹಿಂದೆ ಸರಿಯಬೇಕೆಂದು ಯೋಚಿಸಿದ್ದೇನೆ ಎಂದಿದ್ದಾರೆ.

ನನಗೆ ಗೂಟದ ಕಾರಿನಲ್ಲೇ ಓಡಾಡಬೇಕೆಂಬ ಹುಚ್ಚಿಲ್ಲ. ಈಗ ಬರೀ ದ್ವೇಷ, ಕುತಂತ್ರ, ಜಾತಿ ಆಧರಿತ ರಾಜಕಾರಣ ನಡೆಯುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ನಾನು ರಾಜಕೀಯದಿಂದಲೇ ದೂರ ಸರಿಯಬೇಕೆಂದುಕೊಂಡಿದ್ದೇನೆ ಎಂದುಹೇಳಿದರು.

ನಾನು ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನು. ಮುಖ್ಯಮಂತ್ರಿ ಸ್ಥಾನ, ಗೂಟದ ಕಾರು ಇದ್ದರೆ ಮಾತ್ರ ಜನಸೇವೆ ಮಾಡಬೇಕೆಂದೇನೂ ಇಲ್ಲ. ಅಧಿಕಾರ ಇಲ್ಲದೆಯೂ ಜನರ ಬಳಿ ಇರಬಹುದು. ಆದರೆ ಇಂದು ಜಾತಿ, ದ್ವೇಷ ಮತ್ತು ಕುತಂತ್ರ ರಾಜಕಾರಣ ನಡೆಯುತ್ತಿದೆ. ಇದನ್ನು ಯಾವ ಪಕ್ಷದವರು ಮಾಡುತ್ತಿದ್ದಾರೆ ಎಂಬುದನ್ನು ಜನತೆ ಅವಲೋಕನ ಮಾಡಿ ತೀರ್ಮಾನಿಸಬೇಕು ಎಂದು ಇದೇ ವೇಳೆ ಹೇಳಿದರು.

ಈಗ ಪವಿತ್ರ ಸರ್ಕಾರ:

ಹಿಂದೆ ನಮ್ಮದು ಪಾಪದ ಸರ್ಕಾರ ಅಧಿಕಾರದಲ್ಲಿತ್ತು. ಈಗ ಪವಿತ್ರ ಸರ್ಕಾರ ನಡೆಸುತ್ತಿದ್ದಾರೆ, ನಡೆಸಲಿ ಬಿಡಿ, ಯಾರು ಯಾರನ್ನು ಪವಿತ್ರ ಮಾಡುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು ಬಿಜೆಪಿ ಸರ್ಕಾರದ ಕುರಿತು ಪರೋಕ್ಷವಾಗಿ ವ್ಯಂಗ್ಯವಾಡಿದರು. ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ ಬೆನ್ನಲ್ಲೇ ಯಾವ್ಯಾವ ಅಧಿಕಾರಿಗಳನ್ನು ಒಂದೇ ದಿನದಲ್ಲಿ ಎರಡೆರಡು ಕಡೆ ವರ್ಗಾವಣೆ ಮಾಡಲಾಗಿದೆ ಎಂಬುದು ಗೊತ್ತಿದೆ. ವರ್ಗಾವಣೆ ಎಂಬುದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು ನಿಜ. ಆದರೆ ಅದಕ್ಕೂ ಇತಿ ಮಿತಿ ಇರಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?