ಬೆಂಗಳೂರು ರಸ್ತೆಗೆ ಸರ್ಕಾರ ಚಿನ್ನ, ಬೆಳ್ಳಿ ಹಾಕ್ತಿದೆಯೇ?

Published : Feb 14, 2018, 08:19 AM ISTUpdated : Apr 11, 2018, 01:00 PM IST
ಬೆಂಗಳೂರು ರಸ್ತೆಗೆ ಸರ್ಕಾರ ಚಿನ್ನ, ಬೆಳ್ಳಿ ಹಾಕ್ತಿದೆಯೇ?

ಸಾರಾಂಶ

ವಿಫಲ ಸ್ಟೀಲ್‌ ಬ್ರಿಡ್ಜ್‌ ಯೋಜನೆಯ ಗುತ್ತಿಗೆ ನೀಡಿದ್ದ ಕಂಪನಿಗೇ ಕೆಂಪೇಗೌಡ ಬಡಾವಣೆಯ ರಸ್ತೆ ನಿರ್ಮಾಣದ ಗುತ್ತಿಗೆಯನ್ನೂ ರಾಜ್ಯ ಸರ್ಕಾರ ನೀಡಿದ್ದು, ಒಂದು ಕಿ.ಮೀ.ರಸ್ತೆ ನಿರ್ಮಾಣಕ್ಕೆ 39 ಕೋಟಿ ರು. ವೆಚ್ಚ ಮಾಡಲಾಗುತ್ತಿದೆ. ಆ ರಸ್ತೆಗಳಿಗೆ ಸರ್ಕಾರವು ಚಿನ್ನ ಅಥವಾ ಬೆಳ್ಳಿಯ ಲೇಪನ ಮಾಡುತ್ತಿದೆಯೇ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಬೆಂಗಳೂರು : ವಿಫಲ ಸ್ಟೀಲ್‌ ಬ್ರಿಡ್ಜ್‌ ಯೋಜನೆಯ ಗುತ್ತಿಗೆ ನೀಡಿದ್ದ ಕಂಪನಿಗೇ ಕೆಂಪೇಗೌಡ ಬಡಾವಣೆಯ ರಸ್ತೆ ನಿರ್ಮಾಣದ ಗುತ್ತಿಗೆಯನ್ನೂ ರಾಜ್ಯ ಸರ್ಕಾರ ನೀಡಿದ್ದು, ಒಂದು ಕಿ.ಮೀ.ರಸ್ತೆ ನಿರ್ಮಾಣಕ್ಕೆ 39 ಕೋಟಿ ರು. ವೆಚ್ಚ ಮಾಡಲಾಗುತ್ತಿದೆ. ಆ ರಸ್ತೆಗಳಿಗೆ ಸರ್ಕಾರವು ಚಿನ್ನ ಅಥವಾ ಬೆಳ್ಳಿಯ ಲೇಪನ ಮಾಡುತ್ತಿದೆಯೇ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡ ಬಡಾವಣೆ ಗುತ್ತಿಗೆಯಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ಗಮನಿಸಿದರೆ ಭ್ರಷ್ಟಾಚಾರಕ್ಕೆ ಇದಕ್ಕಿಂತ ಇನ್ನೊಂದು ಉದಾಹರಣೆ ಬೇಕಾ ಎಂದು ಖಾರವಾಗಿ ಪ್ರಶ್ನಿಸಿದರು.

ಸ್ಟ್ರೀಲ್‌ ಬ್ರಿಡ್ಜ್‌ ಯೋಜನೆ ಗುತ್ತಿಗೆಯನ್ನು ಯಾವ ಕಂಪನಿಗೆ ನೀಡಲಾಗಿತ್ತು ಹಾಗೂ ಅದೇನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಅದೇ ಕಂಪನಿಗೆ ಕೆಂಪೇಗೌಡ ಬಡಾವಣೆಯ ರಸ್ತೆ ನಿರ್ಮಾಣದ ಗುತ್ತಿಗೆ ನೀಡಲಾಗಿದೆ. ರಸ್ತೆಗೆ ಚಿನ್ನ ಅಥವಾ ಬೆಳ್ಳಿಯ ಲೇಪನ ಮಾಡಲಾಗುತ್ತಿದೆಯೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಯಾವ ಕಾರಣಕ್ಕಾಗಿ ತರಾತುರಿಯಲ್ಲಿ ಮಾಡಲಾಗುತ್ತಿದೆ ಎಂಬುದನ್ನು ಸರ್ಕಾರ ಹೇಳಬೇಕು ಎಂದು ಒತ್ತಾಯಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ದಿವಾಳಿಯಾಗಿದೆ. ಹೊಸ ಬಡಾವಣೆ ರಚನೆ ಮಾಡಲು ಸಾಧ್ಯವಾಗುತ್ತಿಲ್ಲ. ವೇತನ ನೀಡಲು ಮೂಲೆಯ ನಿವೇಶನಗಳನ್ನು ಮಾರಾಟ ಮಾಡುತ್ತಿದೆ. ಸಮಗ್ರ ಅಭಿವೃದ್ಧಿ ಯೋಜನೆ (ಸಿಡಿಪಿ ಪ್ಲಾನ್‌)ಯನ್ನು ತರಾತುರಿಯಲ್ಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಪಾಕಿಸ್ತಾನಿ ನಾಯಕನ ಹೆಸರಿನಲ್ಲಿ ಮುಂಬೈನಲ್ಲಿ ಇನ್ನೂ ಇದೆ 2.5 ಎಕರೆಯ ಬೃಹತ್ ಬಂಗ್ಲೆ
ಸ್ಯಾಂಡಲ್‌ವುಡ್ ನಿರ್ಮಾಪಕಿ ಪುಷ್ಪಾ ಅರುಣ್‌ಕುಮಾರ್‌ ಹಾಕಿದ್ದ ಅಕ್ರಮ ಕಾಂಪೌಂಡ್ ತೆರವು