ಸದನದಲ್ಲಿ ಸಿಎಂ ಭಾಷಣ: ವಿದಾಯವೋ? ವಿಶ್ವಾಸವೋ?

Published : Jul 19, 2019, 12:59 PM ISTUpdated : Jul 19, 2019, 04:35 PM IST
ಸದನದಲ್ಲಿ ಸಿಎಂ ಭಾಷಣ: ವಿದಾಯವೋ? ವಿಶ್ವಾಸವೋ?

ಸಾರಾಂಶ

ವಿಶ್ವಾಸ ಮತ ಯಾಚನೆ ಕಲಾಪ ಆರಂಭ; ಸಿಎಂ ಎಚ್. ಡಿ. ಕುಮಾರಸ್ವಾಮಿ ಭಾಷಣ; ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಸಿಎಂ; ಬೇಸರ-ವಿಷಾದ ತುಂಬಿಕೊಂಡಿದ್ದ ಭಾಷಣ; ಸದನದಲ್ಲಿ ‘ವಿದಾಯ’ದ ಟೋನ್ ನಲ್ಲಿ ಸಿಎಂ ಭಾಷಣ!   

ಬೆಂಗಳೂರು (ಜು.19): ಗುರುವಾರ ಆರಂಭವಾದ ವಿಶ್ವಾಸ ಮತ ಯಾಚನೆ ಕಲಾಪ ಗದ್ದಲದಲ್ಲಿ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ, ಶುಕ್ರವಾರ ಮಧ್ಯಾಹ್ನ 1.30ರೊಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸಿಎಂ ಸೂಚಿಸಿದ್ದಾರೆ.

ಶುಕ್ರವಾರ ಮತ್ತೆ ಕಲಾಪ ಆರಂಭವಾಗಿದೆ. ಕಲಾಪ ಆರಂಭವಾಗುತ್ತಿದ್ದಂತೆ ಮಾತು ಆರಂಭಿಸಿದ ಸಿಎಂ ಎಚ್.ಡಿ ಕುಮಾರಸ್ವಾಮಿ ಭಾಷಣ ವಿದಾಯದ ಭಾಷಣ ಮಾಡುತ್ತಿದ್ದಾರೋ ಎಂಬಂತಿತ್ತು.

"

ತನ್ನ ರಾಜಕೀಯ  ಜೀವನದ ಆರಂಭ, ಕುಟುಂಬ, ಅಪ್ಪ-ಮಕ್ಕಳ ರಾಜಕಾರಣ,  ಸಮ್ಮಿಶ್ರ ಸರ್ಕಾರ ರಚನೆ ಹಿನ್ನೆಲೆ, ಮುಂದಿನ ಒಂದು ವರ್ಷದ ಆಡಳಿತ... ಹೀಗೆ ಬಹಳ ಸುದೀರ್ಘವಾಗಿ ಮಾತನಾಡಿದರು.

ಇದನ್ನೂ ಓದಿ | ವಿಶ್ವಾಸಮತ ಚರ್ಚೆ ವೇಳೆ ಎದ್ದು ಹೊರ ನಡೆದ ಬಿಜೆಪಿ ಶಾಸಕರು

ದಶಕದ ಹಿಂದಿನ ರಾಜಕೀಯ ಬೆಳವಣಿಗೆಗಳನ್ನು ಸ್ಮರಿಸಿಕೊಂಡ ಕುಮಾರಸ್ವಾಮಿ,  ಧರ್ಮಸಿಂಗ್ ಗೆ ಬೆನ್ನಿಗೆ ಚೂರಿ ಹಾಕಿದ ಆರೋಪ, ಬಳಿಕದ 20 ತಿಂಗಳ ಆಡಳಿತ, ಬಿಜೆಪಿ ಜತೆ ಸಮ್ಮಿಶ್ರ ಸರ್ಕಾರ  ಮುಂತಾದ ವಿಚಾರಗಳನ್ನು ಮೆಲುಕು ಹಾಕಿಕೊಂಡರು.

ಅಮೆರಿಕಾ ಪ್ರವಾಸದ ವೇಳೆ ಬೈಬಲ್ ಓದಿದ ಸನ್ನಿವೇಶ, ಬೈಬಲ್ ನಲ್ಲಿದ್ದ ‘ನ್ಯಾಯ ನಿರ್ಣಯ ದಿನ’ದ ಬಗ್ಗೆ, ಹಣೆಬರಹ, ವಿಧಿಯಾಟ, ಸತ್ಯ, ಧರ್ಮ ಎಂಬ ಆಧ್ಯಾತ್ಮಿಕ ವಿಚಾರಗಳನ್ನೂ  ಕೂಡಾ ಸದನದ ಮುಂದಿಟ್ಟರು. 

ನಾನು ಸಾಂದರ್ಭಿಕ ಶಿಶು, ಕುರ್ಚಿಗೆ ಅಂಟಿಕೊಂಡಿಲ್ಲ, ಅಧಿಕಾರ ಶಾಶ್ವತವಲ್ಲ, ನಮ್ಮ ನಡವಳಿಕೆ ಮತ್ತು ಮೌಲ್ಯಗಳು ಮುಖ್ಯ ಎಂಬ ಮಾತುಗಳು, ಸಿಎಂ ಎಲ್ಲೋ ವಿದಾಯ ಭಾಷಣ ಮಾಡುತ್ತಿದ್ದಾರೋ ಎಂದು ಅನಿಸುವಂತಿತ್ತು. ಜೊತೆಗೆ, ಕಲಾಪ ನಡೆಸುವಲ್ಲಿ ಯಾವುದೇ ಆತುರ ಬೇಡ ಎಂದು ಸ್ಪೀಕರ್‌ಗೆ ಮನವಿಯನ್ನೂ ಮಾಡಿಕೊಂಡರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?