ಸಿಎಂ ಜನತಾ ದರ್ಶನ, ಸಮಸ್ಯೆ ಹೇಳಲು ಹೆಸರು ನೋಂದಾಯಿಸಿ

Published : Sep 15, 2018, 10:43 AM ISTUpdated : Sep 19, 2018, 09:26 AM IST
ಸಿಎಂ ಜನತಾ ದರ್ಶನ, ಸಮಸ್ಯೆ ಹೇಳಲು ಹೆಸರು ನೋಂದಾಯಿಸಿ

ಸಾರಾಂಶ

ಇಂದು (ಶನಿವಾರ) ಬೆಂಗಳೂರಿನಲ್ಲಿ ನಡೆಯಬೇಕಿದ್ದ ಸಿಎಂ ಕುಮಾರಸ್ವಾಮಿಯವರ ಜನತಾ ದರ್ಶನ ಕಾರ್ಯಕ್ರಮ ಬೆಳಗಾವಿಗೆಯಲ್ಲಿ ನಡೆಯಲಿದೆ. 

ಬೆಳಗಾವಿ, (ಸೆ.15): ಇಂದು (ಶನಿವಾರ) ಬೆಂಗಳೂರಿನಲ್ಲಿ ನಡೆಯಬೇಕಿದ್ದ ಸಿಎಂ ಕುಮಾರಸ್ವಾಮಿಯವರ ಜನತಾ ದರ್ಶನ ಕಾರ್ಯಕ್ರಮ ಬೆಳಗಾವಿಗೆಯಲ್ಲಿ ನಡೆಯಲಿದೆ. 

ಇಂದು ಬೆಳಗಾವಿಯಲ್ಲಿ ನಡೆಯಲಿರುವ ಕರ್ನಾಟಕ ಲಾ ಸೊಸೈಟಿ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮಿಸುತ್ತಿದ್ದು, ಸಿಎಂ ಕುಮಾರಸ್ವಾಮಿ ಅಲ್ಲಿಗೆ ತೆರಳ್ತಿದ್ದಾರೆ. ಆದ್ದರಿಂದ ಬೆಂಗಳೂರಿನಲ್ಲಿನ ನಡೆಯಬೇಕಿದ್ದ ಸಿಎಂ ಅವರ ಜನತಾ ದರ್ಶನವನ್ನು ರದ್ದುಗೊಳಿಸಲಾಗಿದೆ,

ಮುಖ್ಯಮಂತ್ರಿಯಾದ ಬಳಿಕ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ಬೆಳಗಾವಿಗೆ ತೆರಳುತ್ತಿದ್ದು, ಮಧ್ಯಾಹ್ನ ಮೂರು ಗಂಟೆಯಿಂದ ಸಂಜೆ 5 ಗಂಟೆವರೆಗೂ ಜನತಾ ದರ್ಶನ ನಡೆಸಿ, ಉತ್ತರ ಕರ್ನಾಟಕ  ಜನರ ಸಮಸ್ಯೆ ಆಲಿಸಲಿದ್ದಾರೆ. 

ಅಹವಾಲುಗಳನ್ನು ಸಲ್ಲಿಸಲು ಸಾರ್ವಜನಿಕರು ಮುಂಚಿತವಾಗಿಯೇ ಮಧ್ಯಾಹ್ನ 1 ಗಂಟೆಗೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿ ತಮ್ಮ ಹೆಸರನ್ನು ನೋಂದಣಿ ಮಾಡಿಸಬಹುದು ಎಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ತಿಳಿಸಿದ್ದಾರೆ.

 ಹೆಸರು ನೋಂದಣಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ವಿಶೇಷ ತಂಡ ಆಗಮಿಸಲಿದ್ದು, ಅಹವಾಲು ಸಲ್ಲಿಸುವ ಸಾರ್ವಜನಿಕರ ಹೆಸರುಗಳನ್ನು ನೋಂದಣಿ ಮಾಡಿಕೊಂಡು, ನೋಂದಣಿ ಸಂಖ್ಯೆಯನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಆತ್ಮನಿರ್ಭರ ಭಾರತ’ಕ್ಕೆ ಅಮೆಜಾನ್ ಪುಷ್ಟಿ
ಬೆಂಗ್ಳೂರಲ್ಲಿ ರಾಜ್ಯದ ಮೊದಲ Gen-Z ಪೋಸ್ಟ್ ಆಫೀಸ್! ಏನಿದರ ವಿಶೇಷತೆ?