
ಹಾಸನ : ಮುಂದೆ ತಾವು ಪ್ರಧಾನಿ ಅಭ್ಯರ್ಥಿ ಆಗುವುದಿಲ್ಲ. ಲೋಕಸಭಾ ಚುನಾವಣೆಗೂ ಕೂಡ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಇನ್ನು ಇದೇ ವೇಳೆ ವಿಪಕ್ಷಗಳ ಬಿಜೆಪಿಯವರಿಗೆ ಕುಮಾರಸ್ವಾಮಿಯೇ ಟಾರ್ಗೆಟ್ ಆಗಿದ್ದಾರೆ. ಅವರನ್ನು ಅಧಿಕಾರದಿಂದ ಇಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಆದರೆ ಮುಂದಿನ ದಿನಗಳಲ್ಲಿ ಹೆಚ್.ಡಿ.ಕುಮಾರಸ್ವಾಮಿ ರಾಷ್ಟ್ರ ರಾಜಕಾರಣಕ್ಕೆ ಹೋಗುವ ಸಾಧ್ಯತೆ ಇದ್ದು, ಅವರು ರಾಷ್ಟ್ರ ರಾಜಕಾರಣಕ್ಕೆ ಕಾಲಿಡಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಬಿಜೆಪಿಗೆ ಜೆಡಿಎಸ್ ಟಾರ್ಗೆಟ್ ಆಗಿದ್ದು, ನಮ್ಮ ಪಕ್ಷವನ್ನು ತೆಗಳುವುದೇ ಅವರಿಗೆ ಕೆಲಸವಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.