'ಗುರುವಾರ ಸಂಜೆ, ಇಲ್ಲ ಶುಕ್ರವಾರ ಬೆಳಗ್ಗೆ ಕುಮಾರಸ್ವಾಮಿ ರಾಜೀನಾಮೆ'

Published : May 22, 2019, 04:08 PM ISTUpdated : May 22, 2019, 05:16 PM IST
'ಗುರುವಾರ ಸಂಜೆ, ಇಲ್ಲ ಶುಕ್ರವಾರ ಬೆಳಗ್ಗೆ ಕುಮಾರಸ್ವಾಮಿ ರಾಜೀನಾಮೆ'

ಸಾರಾಂಶ

ಲೋಕಸಭಾ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವ ಬಿಜೆಪಿ ನಾಯಕರು ಆತ್ಮವಿಶ್ವಾಸದಲ್ಲಿದ್ದಾರೆ. ಈ ಬಾರಿ ಸರ್ಕಾರ ರಚನೆ ಮಾಡಿಯೇ ಸಿದ್ಧ ಎನ್ನುವ ರೀತಿಯಲ್ಲಿ ರಾಜ್ಯ ಬಿಜೆಪಿ ನಾಯಕರು ಘಂಟಾಘೋಷವಾಗಿ ಹೇಳಿತ್ತಿದ್ದಾರೆ. ಇದೀಗ ಡಿವಿಎಸ್ ಕೂಡ ಧ್ವನಿಗೂಡಿಸಿದ್ದಾರೆ. ಹಾಗಾದ್ರೆ ಡಿವಿಎಸ್ ಏನೆಲ್ಲ ಹೇಳಿದ್ದಾರೆ ಮುಂದೆ ನೋಡಿ.

ಬೆಂಗಳೂರು, (ಮೇ.22): ರೋಷನ್ ಬೇಗ್ ಹೇಳಿದ್ದರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯ ಒಬ್ಬ ದುರಂಹಕಾರಿ. ರೋಷನ್ ಬೇಗ್ ಹೇಳಿದ್ದು ನಿಜ. ಸತ್ಯವನ್ನು ಬಹಳ ದಿನ ಮುಚ್ಚಿಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಪರ ಬ್ಯಾಟಿಂಗ್ ಮಾಡಿದ್ದಾರೆ.

ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ನಾಳೆ (ಗುರುವಾರ) ಸಂಜೆಯವರೆಗೆ ಮಾತ್ರ ಮುಖ್ಯಮಂತ್ರಿಯಾಗಿರುತ್ತಾರೆ. ಗರಿಷ್ಠ ಎಂದರೆ ನಾಡಿದ್ದು (ಶುಕ್ರವಾರ) ಬೆಳಗ್ಗೆವರಗೆ ಮಾತ್ರ ಅವರು ಸಿಎಂ ಆಗಿರುತ್ತಾರೆ. ಅವರೇ ರಾಜೀನಾಮೆ ನೀಡಲಿದ್ದಾರೆ ಎಂದು ಭವಿಷ್ಯ ನುಡಿದರು.

ರೋಷನ್ ಬೇಗ್ ಅವರನ್ನು ಬಿಜೆಪಿಗೆ ಆಹ್ವಾನಿಸಿದ ಕೇಂದ್ರ ಸಚಿವ

ಶೇಕಡಾ ನೂರಕ್ಕೆ ನೂರರಷ್ಟು ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳುತ್ತಾರೆ. ಹೊಸ ಸರ್ಕಾರ ರಚನೆಗೆ ನಾವು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿ ಕಳೆದೊಂದು ವರ್ಷದಿಂದ ಮೈತ್ರಿ ಸರ್ಕಾರ ಇರುವುದಿಲ್ಲ ಅಂತಾನೇ ಹೇಳುತ್ತಾ ಬಂದಿದೆ. ಆದ್ರೆ ಅದು ಮಾತಾಗಿಯೇ ಉಳಿದಿವೆ. ಇದೀಗ ಬಿಜೆಪಿ ರಾಜ್ಯ ನಾಯಕರು ಲೋಕಸಭಾ ಫಲಿತಾಂಶದ ಮೇಲೆ ಅವಲಂಬಿತರಾಗಿದ್ದು, ರಿಸಲ್ಟ್ ಬಳಿಕ  ಬಿಜೆಪಿ ಸರ್ಕಾರ ರಚೆನೆ ಮಾಡಿಯೇ ಸಿದ್ಧ ಎಂದು ಘಂಟಾಘೋಷವಾಗಿ ಹೇಳುತ್ತಿದ್ದಾರೆ.

ಹಲವು ಬಾರಿ ಮೈತ್ರಿ ಸರ್ಕಾರವನ್ನು ಕೆಡುವಲು ಕಾಂಗ್ರೆಸ್ ಶಾಸಕರಿಂದಲೇ ಬಿಜೆಪಿ ನಾಯಕರು ಪ್ಲಾನ್ ರೂಪಿಸಿದ್ದರು. ಆದ್ರೆ ಆ ಪ್ಲಾನ್‌ಗಳೆಲ್ಲ ಉಲ್ಟಾಪಲ್ಟಾ ಆಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು