ಜಂತಕಲ್ ಮೈನಿಂಗ್ ಪ್ರಕರಣ: ಹೆಚ್'ಡಿಕೆಗೆ ಮತ್ತೆ ರಿಲೀಫ್

Published : Jun 20, 2017, 07:43 PM ISTUpdated : Apr 11, 2018, 12:48 PM IST
ಜಂತಕಲ್ ಮೈನಿಂಗ್  ಪ್ರಕರಣ:  ಹೆಚ್'ಡಿಕೆಗೆ ಮತ್ತೆ ರಿಲೀಫ್

ಸಾರಾಂಶ

ಹೆಚ್'ಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರು ಈಗಾಗಲೇ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಜೂ.28ರವರೆಗೂ ಮುಂದುವರಿಸಿದರು. ತನಿಖೆ ಅಗತ್ಯವಿದ್ದಲ್ಲಿ ತನಿಖಾಧಿಕಾರಿ ಮುಂದೆ ಹಾಜರಾಗಲು ಸೂಚನೆ ನೀಡಿದರು.

ಬೆಂಗಳೂರು(ಜೂ.20): ಜಂತಕಲ್ ಮೈನಿಂಗ್ ಅಕ್ರಮ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರಿಗೆ ಮತ್ತೆ ರಿಲೀಫ್ ಸಿಕ್ಕಿದೆ.  

ಹೆಚ್'ಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರು ಈಗಾಗಲೇ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಜೂ.28ರವರೆಗೂ ಮುಂದುವರಿಸಿದರು. ತನಿಖೆ ಅಗತ್ಯವಿದ್ದಲ್ಲಿ ತನಿಖಾಧಿಕಾರಿ ಮುಂದೆ ಹಾಜರಾಗಲು ಸೂಚನೆ ನೀಡಿದರು.

ಜಂತಕಲ್ ಮೈನಿಂಗ್ ಮಾಲೀಕರು ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಅಕ್ರಮ ನಡೆದಿರುವ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ. ಇದೆ ಪ್ರಕರಣದ ತನಿಖೆಯನ್ನ ಈಗಾಗಲೇ ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿತ್ತು.  ಒಂದೇ ಪ್ರಕರಣಕ್ಕೆ ಎರಡು ಎಫ್ಐಆರ್ ದಾಖಲಿಸಲು ಸಾಧ್ಯವಿಲ್ಲ. ಎಚ್​ಡಿಕೆ ತನಿಖೆಗೆ ಸಹಕರಿಸುತ್ತಿದ್ದು ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಎಚ್​.ಡಿ. ಕುಮಾರಸ್ವಾಮಿ ಪರ ವಕೀಲರು ವಾದ ಮಂಡಿಸಿದರು.

ಹೆಚ್'ಡಿಕೆ ಅಕ್ರಮದಲ್ಲಿ ಭಾಗಿರುವ ಸಂಬಂಧ ಇತರೆ ಆರೋಪಿಗಳು ಹೇಳಿಕೆ ನೀಡಿದ್ದು, ಅವರನ್ನು ಬಂಧಿಸಿ ವಿಚಾರಣೆ ಮಾಡುವ ಅಗತ್ಯವಿದೆ. ಪ್ರಕರಣ ಕುರಿತು ಸಾಕಷ್ಟು ಸಾಕ್ಷ್ಯ ಕಲೆ ಹಾಕಲಾಗಿದ್ದು, ಎಚ್​ಡಿಕೆಗೆ ನಿರೀಕ್ಷಣಾ ಜಾಮೀನು ನೀಡದಂತೆ SIT ವಕೀಲರ ಮನವಿ ಮಾಡಿದ್ದರು. ಆದರೆ ಇವರ ವಾದವನ್ನು ನ್ಯಾಯಾಧೀಶರು ತಳ್ಳಿ ಹಾಕಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ