ರಾಜ್ಯ ರಾಜಕೀಯ ಡ್ರಾಮಾ ನಡುವೆ ಬಿಜೆಪಿ ಅಧಿಕಾರಕ್ಕೆ ಏರುವ ಭವಿಷ್ಯ

Published : Jul 15, 2019, 03:19 PM ISTUpdated : Jul 15, 2019, 03:21 PM IST
ರಾಜ್ಯ ರಾಜಕೀಯ ಡ್ರಾಮಾ ನಡುವೆ ಬಿಜೆಪಿ ಅಧಿಕಾರಕ್ಕೆ ಏರುವ ಭವಿಷ್ಯ

ಸಾರಾಂಶ

ಕರ್ನಾಟಕ ರಾಜಕೀಯ ಪ್ರಹಸನ ಮುಂದುವರಿದಿದೆ.  ಇದೇ ವೇಳೆ ಬಿಜೆಪಿ ಅಧಿಕಾರಕ್ಕೆ ಏರುವ ಭವಿಷ್ಯ ನುಡಿಯಲಾಗಿದೆ. 

ಹಾಸನ [ಜು. 15] :  ರಾಜ್ಯ ರಾಜಕಾರಣದಲ್ಲಿ ಆಗುತ್ತಿರುವ ಎಲ್ಲಾ ಪ್ರಹಸನಗಳಿಗೂ ಕೂಡ ಸಚಿವ ಎಚ್.ಡಿ. ರೇವಣ್ಣ ಕಾರಣ ಎಂದು ಮಾಜಿ ಸಚಿವ ಎ.ಮಂಜು ಹೇಳಿದ್ದಾರೆ. 

ಸಮ್ಮಿಶ್ರ ಸರ್ಕಾರದಲ್ಲಿ ಸ್ಥಿತಿಯ ಹಿಂದೆ ಲೋಕೋಪಯೋಗಿ ಸಚಿವ ರೇವಣ್ಣ ಇದ್ದಾರೆ. ನಾನು ಈ ಹಿಂದೆಯೇ ಭವಿಷ್ಯ ನುಡಿದಿದ್ದೆ. ಜೆಡಿಎಸ್ ಜೊತೆಗಿನ ಮೈತ್ರಿ ಕಾಂಗ್ರೆಸಿಗೆ ಹಾನಿಯಾಗುತ್ತೆ ಎಂದು ಹಿಂದೆಯೇ ಹೇಳಿದ್ದೆ. ಇದೇ ಕಾರಣದಿಂದಲೇ ನಾನು ಕಾಂಗ್ರೆಸ್ ನಿಂದ ಹೊರಬಂದೆ ಎಂದು ಹಾಸನದಲ್ಲಿ ಮಾತನಾಡಿದ ಎ.ಮಂಜು ಹೇಳಿದ್ದಾರೆ. 

ರೇವಣ್ಣ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದು,  ಸುಪ್ರೀಂ ಆದೇಶ ಗಾಳಿಗೆ ತೂರಿ PWD ಇಂಜಿನಿಯರ್ಸ್ ಗೆ ಬಡ್ತಿ ಮತ್ತು  ವರ್ಗಾವಣೆ ಮಾಡಿದ್ದಾರೆ.  ಆದ್ದರಿಂದ ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ಇದಕ್ಕೆ ತಡೆ ಒಡ್ಡಬೇಕು ಎಂದು ಮಂಜು ಹೇಳಿದರು. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಪ್ಪ ಮಕ್ಕಳ ಜೊತೆ ಹೋದರೆ ಬೀದಿಗೆ ಬರುತ್ತೀರಿ ಎಂದು ಯಡಿಯೂರಪ್ಪ ಸಹ ಕೈ ನಾಯಕರಿಗೆ ಹೇಳಿದ್ದರು. ಅದರಂತೆ ಡಿಕೆಶಿ ಮುಂಬೈನಲ್ಲಿ ಬೀದಿಗೆ ಬಂದರು ಎಂದು ಮಂಜು ವ್ಯಂಗ್ಯವಾಡಿದರು. 

ಈ ಎಲ್ಲಾ ಪ್ರಹಸನಗಳ ಬಳಿಕ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಎ.ಮಂಜು ವಿಶ್ವಾಸ ವ್ಯಕ್ತಪಡಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರಕನ್ನಡ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿ ಖದೀಮರು ಎಸ್ಕೇಪ್!
ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು