ಮಂಡ್ಯ ಚುನಾವಣಾ ಟಿಕೆಟ್ ಸೀಕ್ರೇಟ್ ಬಿಚ್ಚಿಟ್ಟ ರೇವಣ್ಣ

Published : Oct 28, 2018, 10:57 AM IST
ಮಂಡ್ಯ ಚುನಾವಣಾ ಟಿಕೆಟ್ ಸೀಕ್ರೇಟ್ ಬಿಚ್ಚಿಟ್ಟ ರೇವಣ್ಣ

ಸಾರಾಂಶ

 ಮುಂದಿನ ವರ್ಷ ಲೋಕಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಶಿವರಾಮೇಗೌಡರಿಗೆ ಟಿಕೆಟ್‌ ಕೊಡುವ ಯಾವುದೇ ಸಾಧ್ಯತೆ ಇಲ್ಲ ಎಂಬುದನ್ನು ಸ್ವತಃ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರೇ ಪರೋಕ್ಷವಾಗಿ ತಿಳಿಸಿದ್ದಾರೆ.

ಮಂಡ್ಯ/ಕೆ.ಆರ್‌.ಪೇಟೆ :  ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಶಿವರಾಮೇಗೌಡರಿಗೆ ಕೇವಲ ನಾಲ್ಕೂವರೆ ತಿಂಗಳಿಗಷ್ಟೇ ಟಿಕೆಟ್‌ ನೀಡಲಾಗಿದೆ. ಮುಂದಿನ ವರ್ಷ ಲೋಕಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಶಿವರಾಮೇಗೌಡರಿಗೆ ಟಿಕೆಟ್‌ ಕೊಡುವ ಯಾವುದೇ ಸಾಧ್ಯತೆ ಇಲ್ಲ ಎಂಬುದನ್ನು ಸ್ವತಃ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರೇ ಪರೋಕ್ಷವಾಗಿ ತಿಳಿಸಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಶನಿವಾರ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಶಿವರಾಮೇಗೌಡರ ಪರ ಚುನಾವಣಾ ಪ್ರಚಾರ ಮಾಡಿದ ರೇವಣ್ಣ ಈ ವಿಚಾರ ಸ್ಪಷ್ಟಪಡಿಸಿದ್ದಾರೆ.

ಶಿವರಾಮೇಗೌಡರನ್ನು ಕಂಡರೆ ನನಗೆ ತುಂಬಾ ಹೆದರಿಕೆ. ಶಿವರಾಮೇಗೌಡರು ನಾಗಮಂಗಲದಿಂದ ಬಂದು ಬೆಂಗಳೂರನ್ನೇ ಆವರಿಸಿದ್ದಾರೆ. ಸಂಸದ ಆದ ಮೇಲೆ ಉತ್ತರ ಪ್ರದೇಶವನ್ನೇ ಆವರಿಸುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಿದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆಶೀರ್ವಾದ ಶಿವರಾಮೇಗೌಡರ ಮೇಲೆ ಜಾಸ್ತಿಯೇ ಇದೆ. ಹೀಗಾಗಿ ಕೇವಲ ನಾಲ್ಕೂವರೆ ತಿಂಗಳ ಅವಧಿಗೆ ಎಂದು ಶಿವರಾಮೇಗೌಡರಿಗೆ ಈಗ ಟಿಕೆಟ್‌ ಕೊಡಲಾಗಿದೆ. ಇದು ದೇವೇಗೌಡರೇ ಮಾಡಿದ ತೀರ್ಮಾನ ಎಂದರು. ಈ ಮೂಲಕ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಶಿವರಾಮೇಗೌಡರಿಗೆ ಟಿಕೆಚ್‌ ಇಲ್ಲ ಎಂಬುದನ್ನು ರೇವಣ್ಣ ಪರೋಕ್ಷವಾಗಿ ಪ್ರಚಾರ ವೇದಿಕೆಯಲ್ಲೇ ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?