
ಹಾಸನ : ಹಾಸನದಲ್ಲಿ ನಡೆಯುವ 35 ವಾರ್ಡ್ ಗಳಲ್ಲಿಯೂ ಕೂಡ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯ ಧಕ್ಕೆ ಬಾರದಂತೆ ಚುನಾವಣೆ ಎದುರಿಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಜನ ಎಂದಿಗೂ ಕೂಡ ಪಕ್ಷವನ್ನು ನೋಡುವುದಿಲ್ಲ. ಮಾಡುವ ಕೆಲಸವನ್ನು ನೋಡುತ್ತಾರೆ ಎಂದಿದ್ದಾರೆ. ಅಲ್ಲದೇ ಮೈತ್ರಿಯ ಬಗ್ಗೆ ಎರಡೂ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದಿದ್ದಾರೆ.
ಅಲ್ಲದೇ ಇದೇ ವೇಳೆ ಬಿಜೆಪಿ ಮುಖಂಡ ಬಿಎಸ್ ವೈ ಅವರಿಗೂ ಕೂಡ ಸವಾಲೆಸೆದಿದ್ದು, ನಾನು ಯಾವುದಾದರೂ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದರೆ ಬಹಿರಂಗ ಪಡಿಸಲಿ ಎಂದು ಹೇಳಿದ್ದಾರೆ.
ಅಲ್ಲದೇ ಜೆಡಿಎಸ್ ನಲ್ಲಿ ಮೂವರು ಸಿಎಂ ಇದ್ದಾರೆಂಬ ಬಿಜೆಪಿ ಟ್ವೀಟ್ ಗೂ ಕೂಡ ಟೀಕೆ ಮಾಡಿದ್ದು, ಹೊಟ್ಟೆ ತುಂಬಿದವರು ಟ್ವೀಟ್ ಮಾಡ್ತಾರೆ. ಅವರು ಟ್ವೀಟ್ ಮಾಡುತ್ತಿರಲಿ, ನಾವು ಜನರ ಕೆಲಸ ಮಾಡುತ್ತೇವೆ. ಕುಮಾರಸ್ವಾಮಿ ಮಾಡುತ್ತಿರೊ ಕೆಲಸದಿಂದ ಅವರಿಗೆ ಹೊಟ್ಟೆ ಉರಿ ಶುರುವಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.