ಡಿಕೆಶಿಗೆ ಐಟಿ ಶಾಕ್ : ರೇವಣ್ಣ ಕೊಟ್ಟ ಉತ್ತರವೇನು..?

First Published Jun 22, 2018, 9:00 AM IST
Highlights

ಸಚಿವ ಡಿ.ಕೆ. ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ಜಟಾಪಟಿ ನಡೆದಿಲ್ಲ. ನಮ್ಮಿಬ್ಬರ ಬಾಂಧವ್ಯ ಚೆನ್ನಾಗಿಯೇ ಇದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು :  ಸಚಿವ ಡಿ.ಕೆ. ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ಜಟಾಪಟಿ ನಡೆದಿಲ್ಲ. ನಮ್ಮಿಬ್ಬರ ಬಾಂಧವ್ಯ ಚೆನ್ನಾಗಿಯೇ ಇದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಕರಡು ರೂಪಿಸುವ ಸಮಿತಿಯ ಸಭೆ ಮುಗಿದ ಬಳಿಕ ಸಾಲ ಮನ್ನಾ ವಿಚಾರಕ್ಕೆ ಡಿ.ಕೆ.ಶಿವಕುಮಾರ್ ಹಾಗೂ ನನ್ನ ಮಧ್ಯೆ ವೈಮನಸ್ಯ ಉಂಟಾಗಿದೆ ಎಂದು ಬಿಂಬಿಸಲಾಗಿದೆ. 

ಇದೆಲ್ಲವೂ ಮಾಧ್ಯಮಗಳ ಸೃಷ್ಟಿಯಾಗಿದ್ದು, ಅವರು ಪುಕ್ಕಟೆ ಪ್ರಚಾರ ನೀಡುತ್ತಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಆದರೆ ಸಾಲ ಮನ್ನಾ ಮಾಡುವುದು ನಮ್ಮ ಪ್ರಮುಖ ಆದ್ಯತೆ. ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ ಎಂದರು.

ಸಾಲ ಮನ್ನಾ ಜತೆಗೆ ಮಕ್ಕಳ ಆಶ್ರಯ ಇಲ್ಲದ ಹಿರಿಯ ನಾಗರಿಕರು ಅಂತಿಮ ಕಾಲದಲ್ಲಿ ನೆಮ್ಮದಿಯಿಂದ ಇರಲು ಪ್ರತಿ ತಿಂಗಳು ಆರು ಸಾವಿರ ರು. ಮಾಸಾಶನ ನೀಡಬೇಕು. ಹಾಗೂ ಗರ್ಭಿಣಿಯರಿಗೆ ಆರು ತಿಂಗಳ ಕಾಲ ಐದು ಸಾವಿರ ರು. ಮಾಸಾಶನ ನೀಡುವುದನ್ನು ಕಾರ್ಯಕ್ರಮಗಳಲ್ಲಿ ಸೇರಿಸಬೇಕು ಎಂದು ಬೇಡಿಕೆ ಇಟ್ಟಿದ್ದೇನೆ. ಈ ವಿಷಯದಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ಜಟಾಪಟಿ ನಡೆದಿಲ್ಲ. ನಮ್ಮಿಬ್ಬರ ಬಾಂಧವ್ಯ ಚೆನ್ನಾಗಿಯೇ ಇದೆ ಎಂದರು. 

ಐಟಿ ನೋಟಿಸ್ ಖಂಡನೀಯ: ಡಿ.ಕೆ. ಶಿವಕುಮಾರ್ ವಿರುದ್ದ ಐಟಿ ಇಲಾಖೆ ನೋಟಿಸ್ ನೀಡಿದೆ. ಇಂಥ ವಿಷಯದಲ್ಲಿ ದ್ವೇಷದ ರಾಜಕೀಯ ಸರಿಯಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂದು ಹೇಳಿದರು.

click me!