‘ಸಿಎಂ ಕುಮಾರಸ್ವಾಮಿಗೆ ಎಚ್.ಡಿ ರೇವಣ್ಣನೇ ಶನಿ’

Published : Jul 15, 2019, 11:29 AM ISTUpdated : Jul 15, 2019, 11:32 AM IST
‘ಸಿಎಂ ಕುಮಾರಸ್ವಾಮಿಗೆ ಎಚ್.ಡಿ ರೇವಣ್ಣನೇ ಶನಿ’

ಸಾರಾಂಶ

ರಾಜ್ಯ ರಾಜಕೀಯ ಹೈ ಡ್ರಾಮ ಹಿಂದೆ ಇರುವುದು ರೇವಣ್ಣ. ಕುಮಾರಸ್ವಾಮಿ ಅವರು ಎದುರಿಸುತ್ತಿರುವ ಸಮಸ್ಯೆಗೂ ಅವರೇ ಕಾರಣ ಎನ್ನುವ ಮಾತುಗಳು ಕೇಳಿ ಬಂದಿದೆ. 

ಮಂಡ್ಯ [ಜು.15] : ರಾಜ್ಯ ರಾಜಕಾರಣದಲ್ಲಿ ಪ್ರಹಸನ ಮುಂದುವರಿದಿದೆ. ಇದೇ ವೇಳೆ ಹಲವು ನಾಯಕರು ಸಚಿವ ರೇವಣ್ಣ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 

ರಾಜ್ಯ ರಾಜಕೀಯದ ಹೈ ಡ್ರಾಮಾಗೆ ರೇವಣ್ಣ ಅವರೇ ಕಾರಣ. ಸಿಎಂ ಕುಮಾರಸ್ವಾಮಿ ಅವರಿಗೆ ರೇವಣ್ಣ ಶನಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮಂಡ್ಯದಲ್ಲಿ ಮಾತನಾಡಿದ ಮಾಗಡಿ ಕ್ಷೇತ್ರದ ಮಾಜಿ ಶಾಸಕ ಬಾಲಕೃಷ್ಣ,  ನಾವು ಪಕ್ಷ ಬಿಟ್ಟಾಗ ರೇವಣ್ಣ ಶನಿಗಳು ತೊಲಗಿದರು ಎಂದು ಹೇಳಿದ್ದರು. ಈಗ ರಾಜ್ಯದಲ್ಲಿ ಕುಮಾರಸ್ವಾಮಿ ಅವರಿಗೆ ಯಾರು ಶನಿಯಾಗಿದ್ದಾರೆನ್ನುವುದು ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 

ಇದೇ ವೇಳೆ ಮಾಜಿ ಜೆಡಿಎಸ್, ಹಾಲಿ ಕೈ ನಾಯಕ ಚೆಲುವರಾಯ ಸ್ವಾಮಿ ಕೂಡ ಧ್ವನಿಗೂಡಿಸಿದ್ದು, ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಅಲ್ಲೋಲ ಕಲ್ಲೋಲಕ್ಕೆ ರೇವಣ್ಣ ಕಾರಣ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿವಿ ಪತ್ರಿಕೋದ್ಯಮದಲ್ಲಿ ಮೇಲುಗೈ.. ‘ಏಷ್ಯಾನೆಟ್ ಸುವರ್ಣ ನ್ಯೂಸ್‌’ಗೆ 8 ಎನ್ಬಾ ಪ್ರಶಸ್ತಿ
ಬ್ಯೂಟಿ ಸೀಕ್ರೆಟ್.. ಇಲ್ಲಿದೆ ಭಾರತೀಯ ಮಹಿಳೆಯರ ಮೇಕಪ್ ಕ್ರಾಂತಿ ಶುರುವಾದ ಕತೆ!