ಡಿಕೆಶಿ, ಸಿಎಂ ಸಿದ್ದರಾಮಯ್ಯ, ಬಿಎಸ್ವೈ ಒಂದೇ ವರ್ಗದವರು : ನಮ್ಮದು 125 ಮಿಷನ್

Published : Aug 19, 2017, 07:54 PM ISTUpdated : Apr 11, 2018, 01:05 PM IST
ಡಿಕೆಶಿ, ಸಿಎಂ ಸಿದ್ದರಾಮಯ್ಯ, ಬಿಎಸ್ವೈ ಒಂದೇ ವರ್ಗದವರು : ನಮ್ಮದು 125 ಮಿಷನ್

ಸಾರಾಂಶ

 ಧರ್ಮದ ವಿಚಾರದಲ್ಲಿ ರಾಜಕಾರಣಿಗಳು ಮೂಗು ತೂರಿಸುವುದು ತಪ್ಪು. ಅಲ್ಲದೆ ಇದು ಲಿಂಗಾಯತ ಸಮುದಾಯದ ಸ್ವಾಮೀಜಿ, ಮುಖಂಡರಿಗೆ ಬಿಟ್ಟ ವಿಚಾರ

ಅಥಣಿ(ಆ.19): ಸಚಿವ ಡಿಕೆಶಿ, ಸಿಎಂ ಸಿದ್ದರಾಮಯ್ಯ, ಬಿಎಸ್​ವೈ ಒಂದೇ ವರ್ಗಕ್ಕೆ ಸೇರಿದವರು ಇವರು ರಾಜ್ಯದ ಜನರ ದಿಕ್ಕು ತಪ್ಪಿಸುವಲ್ಲಿ ನಿಸ್ಸೀಮರು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ  ಮೂವರು ನಾಯಕರ ವಿರುದ್ಧವೂ ವಾಗ್ದಾಳಿ ನಡೆಸಿದರು

ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಡಿಕೆಶಿ, ಸಿಎಂ ಸಿದ್ದರಾಮಯ್ಯ, ಬಿಎಸ್​ವೈ ಅವರು ರಾಜಕೀಯವಾಗಿ ಕುಮಾರಸ್ವಾಮಿಯನ್ನು ಮುಗಿಸಲು ಪ್ರಯತ್ನಿಸಿದ್ದರು. ಆದರೆ ಕುಮಾರಸ್ವಾಮಿಯನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಇದೇ ಸಂದರ್ಭದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆ ವಿಚಾರವಾಗಿ ಮಾತನಾಡಿದ ಅವರು, ಧರ್ಮದ ವಿಚಾರದಲ್ಲಿ ರಾಜಕಾರಣಿಗಳು ಮೂಗು ತೂರಿಸುವುದು ತಪ್ಪು. ಅಲ್ಲದೆ ಇದು ಲಿಂಗಾಯತ ಸಮುದಾಯದ ಸ್ವಾಮೀಜಿ, ಮುಖಂಡರಿಗೆ ಬಿಟ್ಟ ವಿಚಾರ ಎಂದು ತಿಳಿಸಿದರು.

ಜೆಡಿಎಸ್ ರೆಬಲ್ ಶಾಸಕರ ಕ್ಷೇತ್ರದಲ್ಲಿ ಗೆಲ್ಲುವ ಶಪಥ ಮಾಡಿದ್ದೇವೆ. ಶಪಥ ಮಾಡುವುದಷ್ಟೇ ಅಲ್ಲ ಗೆಲ್ಲುವ ನಿಟ್ಟಿನಲ್ಲಿ ಸಕಲ ಪ್ರಯತ್ನ ಮಾಡುತ್ತೇವೆ. ಜೆಡಿಎಸ್​ನಿಂದ 7 ಶಾಸಕರ ಹೊರತಾಗಿ ಪಕ್ಷ ತೊರೆಯುವ ಪ್ರಸ್ತಾಪ ಇಲ್ಲ. ಜೆಡಿಎಸ್'ನಿಂದ ಮಿಷನ್ 125 ಗೆಲ್ಲುವುದು ನಮ್ಮ ಗುರಿ ಎಂದು ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದು ವೈರಸ್ ಎಂಟ್ರಿ, 14 ಕೋಟಿ ರೂ ಕಳೆದುಕೊಂಡು ರ‍್ಯಾಪಿಡೋ ಚಾಲಕನಾದ ಉದ್ಯಮಿ ಕಣ್ಣೀರ ಕತೆ
ಒಂದೇ ವರ್ಷದಲ್ಲಿ 1 ಲಕ್ಷ ಮೌಲ್ಯದ ಕಾಂಡೋಮ್‌‌ ಖರೀದಿ ಮಾಡಿದ ಚೆನ್ನೈ ವ್ಯಕ್ತಿ!