
ಬೆಂಗಳೂರು(ಆ. 10): ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್'ಡಿ ಕುಮಾರಸ್ವಾಮಿಯವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಹೈಕೋರ್ಟ್'ನ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ಕೆಲವು ಷರತ್ತುಗಳನ್ನು ಕೂಡ ಕೋರ್ಟ್ ವಿಧಿಸಿದೆ. ಸುಪ್ರೀಂ ಕೋರ್ಟ್'ಗೆ ಅಂತಿಮ ವರದಿ ಸಲ್ಲಿಸುವವರೆಗೂ ಜಾಮೀನಿನ ಅವಧಿ ಇರುತ್ತದೆ. ಅಲ್ಲದೆ ಪ್ರತೀ ಸೋಮವಾರ ಅಥವಾ ಗುರುವಾರ ಕುಮಾರಸ್ವಾಮಿಯವರು ಎಸ್'ಐಟಿ ಕಛೇರಿಗೆ ತೆರಳಿ ಸಹಿ ಮಾಡಿ ಬರಬೇಕು. ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು. ಅಲ್ಲದೇ, ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆಯೂ ಕುಮಾರಸ್ವಾಮಿಯವರಿಗೆ ಕೋರ್ಟ್ ಸೂಚನೆ ನೀಡಿದೆ.
ಜಾಮೀನಿಗೆ ವಿಧಿಸಿದ ಷರತ್ತುಗಳು:
* ಪ್ರತೀ ಸೋಮವಾರ ಅಥವಾ ಗುರುವಾರ ಎಸ್ಐಟಿ ಕಛೇರಿಗೆ ತೆರಳಿ ಸಹಿ ಹಾಕಬೇಕು
* ಎಸ್'ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದಾಗಲೆಲ್ಲಾ ಹಾಜರಾಗಬೇಕು
* ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಬಾರದು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.