ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸಲು ಚಿಂತನೆ: ಎಚ್‌ಡಿಕೆ

Published : May 26, 2017, 10:31 AM ISTUpdated : Apr 11, 2018, 12:36 PM IST
ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸಲು ಚಿಂತನೆ: ಎಚ್‌ಡಿಕೆ

ಸಾರಾಂಶ

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು. ಕುಮಾರಸ್ವಾಮಿ ಅವರು ದೇವರಹಿಪ್ಪರಗಿ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಇತ್ತೀಚಿನ ದಿನಗಳಲ್ಲಿ ಗುಸುಗುಸು ಇದೆ. ಅದರ ಬೆನ್ನಲ್ಲೇ ಎಚ್‌ಡಿಕೆ ಅವರ ಈ ಹೇಳಿಕೆ ಹೊರಬಿದ್ದಿದೆ.

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಸುಳಿವನ್ನು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ನೀಡಿದ್ದಾರೆ. ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸುವ ಕುರಿತು ಚಿಂತನೆ ನಡೆಸುತ್ತಿದ್ದೇನೆ. ಈ ಕುರಿತು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು. ಕುಮಾರಸ್ವಾಮಿ ಅವರು ದೇವರಹಿಪ್ಪರಗಿ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಇತ್ತೀಚಿನ ದಿನಗಳಲ್ಲಿ ಗುಸುಗುಸು ಇದೆ. ಅದರ ಬೆನ್ನಲ್ಲೇ ಎಚ್‌ಡಿಕೆ ಅವರ ಈ ಹೇಳಿಕೆ ಹೊರಬಿದ್ದಿದೆ.

ಈ ನಡುವೆ, ಪಕ್ಷದ ಹಿರಿಯ ಮುಖಂಡ ಜಿ.ಟಿ.ದೇವೇಗೌಡ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ದೂರು ನೀಡಲು ಮುಂದಾಗಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಮೈಸೂರು ಜಿಲ್ಲಾ ಜೆಡಿಎಸ್‌ನಲ್ಲಿ ಕೆಲವೊಂದು ಬೆಳವಣಿಗೆಗಳು ಆಗಿವೆ. ಈ ಕುರಿತು ಬೆಂಗಳೂರಿಗೆ ಹೋದ ಬಳಿಕವೇ ಪೂರ್ಣ ಮಾಹಿತಿ ಪಡೆದುಕೊಂಡು ಕ್ರಮ ಕೈಗೊಳ್ಳುತ್ತೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆಯ ಶೈಕ್ಷಣಿಕ ಪುನರುಜ್ಜೀವನದ ಶಿಲ್ಪಿ ಶಾಮನೂರು
ಒಂದನೇ ತರಗತಿಯಿಂದಲೇ ಆಯುರ್ವೇದ ಕಲಿಸಿ: ರಾಘವೇಶ್ವರ ಭಾರತೀ ಸ್ವಾಮೀಜಿ ಸಲಹೆ