ಅಧಿಕಾರಿಗಳ ಜೊತೆ ಡೀಲ್ ಮಾಡುವುದು ಸಿದ್ದರಾಮಯ್ಯರಿಗೆ ಕರಗತ : ಎಚ್’ಡಿಕೆ ವಾಗ್ದಾಳಿ

Published : Mar 10, 2018, 03:47 PM ISTUpdated : Apr 11, 2018, 01:01 PM IST
ಅಧಿಕಾರಿಗಳ ಜೊತೆ ಡೀಲ್ ಮಾಡುವುದು ಸಿದ್ದರಾಮಯ್ಯರಿಗೆ ಕರಗತ : ಎಚ್’ಡಿಕೆ ವಾಗ್ದಾಳಿ

ಸಾರಾಂಶ

ಡೀಲ್ ಮಾಡುವುದನ್ನು ಕುಮಾರಸ್ವಾಮಿಯಿಂದ ಕಲಿಯಬೇಕಾಗಿಲ್ಲ ಎಂದು ಹೇಳಿದ ಸಿಎಂ ಸಿದ್ದರಾಮಯ್ಯರಿಗೆ ಎಚ್’ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.  ಅಧಿಕಾರಿಗಳ ಜೊತೆ ಡೀಲ್ ಮಾಡಿಕೊಳ್ಳುವುದು ಸಿದ್ದರಾಮಯ್ಯರಿಗೆ ಕರಗತ ಎಂದು ತುಮಕೂರಿನಲ್ಲಿ ತಿರುಗೇಟು ನೀಡಿದ್ದಾರೆ.

ತುಮಕೂರು : ಡೀಲ್ ಮಾಡುವುದನ್ನು ಕುಮಾರಸ್ವಾಮಿಯಿಂದ ಕಲಿಯಬೇಕಾಗಿಲ್ಲ ಎಂದು ಹೇಳಿದ ಸಿಎಂ ಸಿದ್ದರಾಮಯ್ಯರಿಗೆ ಎಚ್’ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.  ಅಧಿಕಾರಿಗಳ ಜೊತೆ ಡೀಲ್ ಮಾಡಿಕೊಳ್ಳುವುದು ಸಿದ್ದರಾಮಯ್ಯರಿಗೆ ಕರಗತ ಎಂದು ತುಮಕೂರಿನಲ್ಲಿ ತಿರುಗೇಟು ನೀಡಿದ್ದಾರೆ.

ನಾವು ಡೀಲ್ ಮಾಡುವ ಜಾಯಮಾನದಲ್ಲಿ ಬಂದಿಲ್ಲ. ಅಧಿಕಾರಿಗಳ ಜೊತೆ ಮಾಡುವ ಡೀಲ್ ಹೇಗೆ ಮಾಡಬೇಕು, ಕಿಕ್ ಬ್ಯಾಕ್ ವ್ಯವಹಾರದಲ್ಲಿ ಹೇಗೆ ರುಜು ಹಾಕಿಸಿಕೊಳ್ಳಬೇಕು ಎನ್ನುವುದರಲ್ಲಿ ಸಿದ್ದರಾಮಯ್ಯ ಪರಿಣತಿ ಹೊಂದಿದ್ದಾರೆ ಎಂದು ವಾಕ್ ಪ್ರಹಾರ ನಡೆಸಿದರು.

ಸಿದ್ದರಾಮಯ್ಯ ಇರುವುದೇ ಈ ರಾಜ್ಯವನ್ನು ಲೂಟಿ ಮಾಡಲು ಎನ್ನುವುದು ಅಂಕಿ ಅಂಶಗಳಿಂದ ಈಗಾಗಲೇ ಸಾಬೀತಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ದುರ್ಬಲವಾಗಿರುವ ಬಗ್ಗೆ ಇಂಗ್ಲೀಷ್ ನಿಯತಕಾಲಿಕೆಯೊಂದು ಬಹಿರಂಗ ಮಾಡಿದೆ. ರಾಜ್ಯದ ಬೊಕ್ಕಸವನ್ನು ದಿವಾಳಿ ಮಾಡಿ ಹೋಗುತ್ತಿದ್ದಾರೆ.  ಸಿದ್ದರಾಮಯಯ್ಯನವರ ದುರಹಂಕಾರ, ಗರ್ವ, ದುಡ್ಡಿನ ಮದ ಅವರನ್ನ  ಈ ರೀತಿ ಮಾತನಾಡಿಸುತ್ತಿದೆ ಎಂದು ಹೇಳಿದ್ದಾರೆ.

ಅಲ್ಲದೇ ನಾನು ಸಿದ್ದರಾಮಯ್ಯ ಅವರಿಗೆ ಪಾಠ ಹೇಳುವಷ್ಟು ದೊಡ್ಡ ವ್ಯಕ್ತಿಯೂ ಅಲ್ಲ . ಆರೋಗ್ಯ ಸಚಿವರೇ ಲಂಚ ತೆಗೆದುಕೊಳ್ಳುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದರು. ಅಧಿಕಾರಿಗಳಿಗೆ ಲಂಚದ ಪಾಠ ಮಾಡಿದ್ದರು ಎಂದು ಹರಿಹಾಯ್ದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ: ಕುತೂಹಲ!
ರಾಯಚೂರು: ತಾಯಿ ಬುದ್ದಿವಾದ ಹೇಳಿದಕ್ಕೆ ತುಂಗಭದ್ರಾ ಕಾಲುವೆಗೆ ಹಾರಿ ದುಡುಕಿದ ಮಗಳು!