ಸಿದ್ದರಾಮಯ್ಯ ಅಧಿಕಾರದ ದರ್ಪ 50 ದಿನ ಮಾತ್ರ

Published : Mar 12, 2018, 11:45 AM ISTUpdated : Apr 11, 2018, 12:45 PM IST
ಸಿದ್ದರಾಮಯ್ಯ ಅಧಿಕಾರದ ದರ್ಪ 50 ದಿನ ಮಾತ್ರ

ಸಾರಾಂಶ

ಸಿದ್ದರಾಮಣ್ಣ ಇನ್ನು ಐವತ್ತೇ ದಿನ ನಿಮ್ಮ ಅಧಿಕಾರದ ದರ್ಪ, ಮುಂದಿನ ಸರ್ಕಾರ ರೈತರ ಸರ್ಕಾರ’ ಎಂದು ಗುಡುಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರ ಸುಳ್ಳು ಲೆಕ್ಕಾಚಾರ ನೀಡಿ ಜನರನ್ನು ವಂಚಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು : ‘ಸಿದ್ದರಾಮಣ್ಣ ಇನ್ನು ಐವತ್ತೇ ದಿನ ನಿಮ್ಮ ಅಧಿಕಾರದ ದರ್ಪ, ಮುಂದಿನ ಸರ್ಕಾರ ರೈತರ ಸರ್ಕಾರ’ ಎಂದು ಗುಡುಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರ ಸುಳ್ಳು ಲೆಕ್ಕಾಚಾರ ನೀಡಿ ಜನರನ್ನು ವಂಚಿಸುತ್ತಿದೆ ಎಂದು ಆರೋಪಿಸಿದ್ದಾರೆ.

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಅರೇಮಲ್ಲೇನಹಳ್ಳಿಯಲ್ಲಿ ಭಾನುವಾರ ನಡೆದ ಜೆಡಿಎಸ್ ವಿಕಾಸಪರ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ವಾಗ್ದಾಳಿ ನಡೆಸಿದ ಅವರು, ಇದುವರೆಗೂ ರೈತರಿಗೆ ಸಿದ್ದರಾಮಯ್ಯ ಮಾಡಿರುವ ಮೋಸಗಳಿಗೆ ಜನರು ಸರಿಯಾದ ಬುದ್ಧಿ ಕಲಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂದರು.

ಸಾವಿರಾರು ಕೋಟಿ ಖರ್ಚು ಮಾಡಿ ರಾಜ್ಯದಲ್ಲಿ ನೀರಾವರಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಲಿಪ್‌ಸ್ಟಿಕ್, ಪೌಡರ್ ಹಚ್ಚಿಕೊಂಡ ಮಂತ್ರಿ ಪಾಟೀಲ್ ಬಡಾಯಿ ಕೊಚ್ಚಿಕೊಳ್ಳುತ್ತಾರೆ. ಆದರೆ ಜನರು ಕೆರೆಗಳಿಗೆ ನೀರಿಲ್ಲ, ಕುಡಿಯಲು ನೀರಿಲ್ಲ ಅಂತ ಪ್ರತಿದಿನ ಪ್ರತಿಭಟನೆ ಮಾಡುತ್ತಲೇ ಇದ್ದಾರೆ. 15 ಲಕ್ಷ ಮನೆಗಳನ್ನು ಕಟ್ಟಿಸಿಕೊಡಲಾಗಿದೆ ಎಂದು ಸರ್ಕಾರ ಸುಳ್ಳು ವರದಿ ನೀಡಿ ಜನರನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು.

ಮುಂಬರುವ ಜೆಡಿಎಸ್ ಸರ್ಕಾರದಲ್ಲಿ ಸುಮಾರು 25,000 ಕೋಟಿ ರು. ವೆಚ್ಚದ ಕೃಷಿ ನೀತಿಯನ್ನು ಜಾರಿಗೆ ತಂದು ರೈತರ ಸರ್ವತೋಮುಖ ಅಭಿವೃದ್ಧಿಗೆ ಕಂಕಣತೊಡುವುದಾಗಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೀಡಿ, ಸಿಗ‘ರೇಟು’ ಫೆ.1ರಿಂದ ತುಟ್ಟಿ
Karnataka News Live:ಗಣಿನಾಡು ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ನಾರಾ ಭರತ್ ರೆಡ್ಡಿ ನಡುವೆ ಭಾರಿ ಕಾಳಗ: ಗುಂಡಿನ ದಾಳಿಗೆ ಓರ್ವ ಬಲಿ