
ವಿಜಯಪುರ (ಏ. 08): ಅಪ್ಪನ ಮೇಲೆ ಆಣೆ ಹೇಳಿಕೆ ವಿವಾದಕ್ಕೆ ಎಚ್ ಡಿಕೆ ಟಾಂಗ್ ನೀಡಿದ್ದಾರೆ.
ಸಿಎಂ ಬಳಸುವ ಭಾಷೆ ನೋಡಿದರೇ ಬಾರ್’ನಲ್ಲಿ ಪೆಗ್ ಹಾಕಿ ಕುಳಿತು ಮಾತನಾಡಿದಂತಿದೆ. ಸಿದ್ದರಾಮಯ್ಯಾ ಮಾತನಾಡುವಾಗ ಸಿಎಂ ಥರ ಮಾತನಾಡಿಲ್ಲ. ಬಾರ್ ನಲ್ಲಿ ಪೆಗ್ ಹಾಕಿದವನಂತೆ ಮಾತನಾಡ್ತಿದ್ದಾರೆ. ಇದನ್ನ ಮೊದಲು ನಿಲ್ಲಿಸಲಿ ಎಂದು ಸಿಎಂರನ್ನ ಕುಮಾರಸ್ವಾಮಿ ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ.
ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರಚಾರ ಮಾಡಿದಷ್ಟು ಕಾಂಗ್ರೆಸ್ ಪಕ್ಷ ಕುಸಿಯುತ್ತಾ ಹೋಗುತ್ತೆ. ರಾಹುಲ್ ಪ್ರಚಾರದಿಂದ ಜನಾಕರ್ಷಣೆ ಆಗೋದಿಲ್ಲ. ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ ಯಶಸ್ವಿಯಾಗೋದಿಲ್ಲ. ಕೋಲಾರ, ಚಿಕ್ಕಬಳ್ಳಾಪುರ ದಲ್ಲಿ ಜನರು ಸೇರಿಲ್ಲ. ಜನತೆಗೆ ರಾಷ್ಟ್ರೀಯ ಪಕ್ಷಗಳ ನಾಯಕರ ಮೇಲಿನ ವಿಶ್ವಾಸ ಕುಸಿದಿದೆ. ಜನರಿಗೆ ಆಕರ್ಷಣೆ ಕಡಿಮೆಯಾಗಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.