
ಬೆಂಗಳೂರು: ಮೊದಲು ಯಡಿಯೂರಪ್ಪ ಈ ಕೇಸನ್ನು ಜೀವಂತವಾಗಿ ಇಟ್ಟುಕೊಂಡಿದ್ದರು. ಈ ಪ್ರಕರಣದಲ್ಲಿ ಏನು ಬಂಡವಾಳ ಇಲ್ಲ. ಆದರೂ ಈಗ ಕಾಂಗ್ರೆಸ್ ಸರ್ಕಾರ ಇದನ್ನು ಜೀವಂತವಾಗಿ ಇಟ್ಟುಕೊಂಡಿದ್ದಾರೆ. 10 ವರ್ಷದ ಹಿಂದೆ ನಡೆದಿರೋದು ಈಗ ಜೀವಂತ ಆಗಿದೆ, ಎಂದು ಜಂತಕಲ್ ಪ್ರಕರಣದ ಬಗ್ಗೆ ಎಚ್’ಡಿಕೆ ಹೇಳಿದ್ದಾರೆ.
ಎಸ್ಐಟಿ ಕಚೇರಿಯಿಂದ ಹೊರಬಂದ ಮಾತನಾಡಿದ ಎಚ್ಡಿಕೆ, ನಾಳೆ ಇದರ ಬಗ್ಗೆ ಸಂಪೂರ್ಣವಾಗಿ ಮಾತನಾಡಲಿದ್ದೇನೆ. ಸಿದ್ದರಾಮಯ್ಯ ಎಷ್ಟು ಡೋಂಗಿ ಎಂಬುವುದನ್ನು ನಾಳೆ ಬಯಲಿಗೆಳೆಯುತ್ತೆನೆ ಎಂದು ಗುಡುಗಿದ್ದಾರೆ.
ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಆದರೆ 15 ದಿನಕ್ಕೊಮ್ಮೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯವು ಕುಮಾರಸ್ವಾಮಿ ಅವರಿಗೆ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.