ಕುಟುಂಬದಿಂದ 3ನೇ ವ್ಯಕ್ತಿಗೆ ಟಿಕೆಟ್: ಹೆಚ್'ಡಿಕೆ ವಿಭಿನ್ನ ಹೇಳಿಕೆ

Published : Mar 03, 2018, 06:29 PM ISTUpdated : Apr 11, 2018, 12:48 PM IST
ಕುಟುಂಬದಿಂದ 3ನೇ ವ್ಯಕ್ತಿಗೆ ಟಿಕೆಟ್: ಹೆಚ್'ಡಿಕೆ ವಿಭಿನ್ನ ಹೇಳಿಕೆ

ಸಾರಾಂಶ

ಪಕ್ಷದಲ್ಲಿ ಯಾರು ಬೇಕಾದರೂ ಟಿಕೆಟ್ ಕೇಳಬಹುದು. ಅವರಿಗೆ ಗೆಲ್ಲುವ ಸಾಮರ್ಥ್ಯವಿದ್ದರೆ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ'ಎಂದು ಅಚ್ಚರಿಯ ಹೇಳಿಕೆ ನೀಡಿದರು.

ಮಂಡ್ಯ/ಮೈಸೂರು(ಮಾ.03): ದೇವೇಗೌಡರ ಕುಟುಂಬದಿಂದ ಮೂರನೇ ವ್ಯಕ್ತಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಭಿನ್ನ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಪ್ರಜ್ವಲ್ ರೇವಣ್ಣ ರಾಜರಾಜೇಶ್ವರಿ ನಗರದಲ್ಲಿ ಸ್ಪರ್ಧಿಸುವುದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಟಿಕೆಟ್ ಬೇಕು ಅಂತ ಅಪೇಕ್ಷ ಪಡುವಲ್ಲಿ ತಪ್ಪೇನಿಲ್ಲ. ರಾಜರಾಜೇಶ್ವರಿ ನಗರದಲ್ಲಿ ಇನ್ನು ಅಭ್ಯರ್ಥಿ ಫೈನಲ್ ಆಗಿಲ್ಲ. ಹಾಗಾಗಿ ಅವರು ಟಿಕೆಟ್ ಕೇಳುತ್ತಿದ್ದಾರೆ. ಆ ಬಗ್ಗೆ ಪಕ್ಷದ ಒಳಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಪಕ್ಷದಲ್ಲಿ ಯಾರು ಬೇಕಾದರೂ ಟಿಕೆಟ್ ಕೇಳಬಹುದು. ಅವರಿಗೆ ಗೆಲ್ಲುವ ಸಾಮರ್ಥ್ಯವಿದ್ದರೆ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ'ಎಂದು ಅಚ್ಚರಿಯ ಹೇಳಿಕೆ ನೀಡಿದರು.

ಕುಟುಂಬದಲ್ಲಿ ಇಬ್ಬರು ಮಾತ್ರ ಸ್ಪರ್ಧೆ

ಶ್ರೀರಂಗಪಟ್ಟಣದಲ್ಲಿ ಇದೇ ವಿಚಾರವಾಗಿ ಮಾತನಾಡಿ, ನಮ್ಮ ಕುಟುಂಬದಲ್ಲಿ ಇಬ್ಬರು ಮಾತ್ರ ರಾಜಕೀಯ ಕಣದಲ್ಲಿ ಇರ್ತಾರೆ. ಒಂದು ವೇಳೆ ನಮ್ಮ ಕುಟುಂಬದಿಂದ ಮೂರನೇ ಅಭ್ಯರ್ಥಿ ಬರ್ತಾರೆ ಅಂದ್ರೆ ನಾನೇ ರಾಜಕೀಯ ನಿವೃತ್ತಿ ಪಡೀತ್ತೀನಿ. ನಮ್ಮ ಕುಟುಂಬವನ್ನು ಯಾರು ಒಡೆಯಲು ಸಾಧ್ಯವಿಲ್ಲ. ಅದಕ್ಕೆ ನಾನು ಬಿಡುವುದು ಇಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ