
ಬೆಂಗಳೂರು (ಜೂ. 05): ಸಿಎಂ ಕುಮಾರ ಸ್ವಾಮಿ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್’ಗೂ ಮುನ್ನ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವೆ ಜಟಾಪಟಿ ನಡೆದಿತ್ತು. ಕಳೆದ ಸರ್ಕಾರದ ’ಭಾಗ್ಯ’ಗಳನ್ನು, ಯೋಜನೆಗಳನ್ನು ಮುಂದುವರೆಸುವಂತೆ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರು.
ಈ ಬಜೆಟ್’ನಲ್ಲಿ ಹಿಂದಿನ ಸರ್ಕಾರದ ಯೋಜನೆಗಳನ್ನು ಯಥಾವತ್ತಾಗಿ ಮುಂದುವರೆಸಲು ಅನುದಾನ ನೀಡದಿದ್ದರೂ ಕೆಲ ಯೋಜನೆಗಳನ್ನು ಮುಂದುವರೆಸಲು ಅನುದಾನ ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯಕ್ಕೆ ಕತ್ತರಿ ಹಾಕಿದ್ದರೂ ಸಂಪೂರ್ಣವಾಗಿ ನಿಲ್ಲಿಸಿಲ್ಲ. ಅನ್ನಭಾಗ್ಯ ಯೋಜನೆಯನ್ನು 7 ಕೆಜಿ ಬದಲು 5 ಕೆಜೆಗೆ ಇಳಿಸಲಾಗಿದೆ. 5 ಕೆಜಿ ಅಕ್ಕಿ ಜೊತೆ 1 ಕೆಜಿ ಪಾಮ್ ಎಣ್ಣೆ, 1 ಕೆಜಿ ಉಪ್ಪು, 1 ಕೆಜಿ ಸಕ್ಕರೆ, ಅರ್ಧ ಕೆಜಿ ತೊಗರಿ ಬೇಳೆಯನ್ನು ಬಿಪಿಎಲ್ ಪಡಿತರದಾರರಿಗೆ ನೀಡಲಾಗುತ್ತದೆ. 3.85 ಕೋಟಿ ಜನರು ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ.
ಇನ್ನು ವಿದ್ಯಾರ್ಥಿಗಳಿಗೆ ನೀಡುವ ಕ್ಷೀರ ಭಾಗ್ಯಯೋಜನೆಯನ್ನು ಮುಂದುವರೆಸಲಾಗುತ್ತದೆ. ಅದೇ ರೀತಿ ಇಂದಿರಾ ಕ್ಯಾಂಟೀನನ್ನು ಎಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸ್ಥಾಪನೆ ಮಾಡಲಾಗುತ್ತದೆ. ಒಟ್ಟಿನಲ್ಲಿ ಸಿದ್ದರಾಮಯ್ಯ ಮಾತನ್ನು ಸಂಪೂರ್ಣವಾಗಿ ತೆಗೆದು ಹಾಕದೇ ಹಿಂದಿನ ಸರ್ಕಾರದ ಯೋಜನೆಗಳನ್ನು ಮುಂದುವರೆಸುವ ಮೂಲಕ ಎಚ್ ಡಿಕೆ ಸಿದ್ದರಾಮಯ್ಯರನ್ನು ಸಂತೈಸುವ ಪ್ರಯತ್ನ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.