
ಚೆನ್ನೈ (ಫೆ.07): ಆಂಧ್ರದ ಪೋಲೀಸ್ ಅಧಿಕಾರಿ ಯೊಬ್ಬರು ರಸ್ತೆ ನಿಯಮ ಉಲ್ಲಂಘಿಸಿದ ಬೈಕ್ ಸವಾರನ ಮುಂದೆ ಕೈ ಜೋಡಿಸಿ ಮನವಿ ಮಾಡಿಕೊಂಡ ಫೋಟೋವೊಂದು ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ತಮಿಳುನಾಡಿನಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಯ ಮುಂದೆ ಮಂಡಿಯೂರಿ ಕುಳಿತು ವಿದ್ಯಾಭ್ಯಾಸ ಮಾಡುವಂತೆ ಕೈಮುಗಿದು ಬೇಡುತ್ತಿರುವ ಫೋಟೋ ಭಾರೀ ವೈರಲ್ ಆಗಿದೆ.
ತಮಿಳುನಾಡಿನ ವಿಲ್ಲುಪುರಂನಲ್ಲಿರುವ ಸರ್ಕಾರಿ ಪ್ರೌಢ ಶಾಲೆಯೊಂದರ ಮುಖ್ಯಶಿಕ್ಷಕ ಜಿ. ಬಾಲು ಎನ್ನುವವರು ತರಗತಿಗೆ ಹಾಜರಾಗದ ವಿದ್ಯಾರ್ಥಿಗಳ ಮನೆಗೆ ಸ್ವತಃ ತೆರಳಿ, ಶಾಲೆಗೆ ಆಗಮಿಸುವಂತೆ ಮತ್ತು ಉತ್ತಮ ವಿದ್ಯಾಭ್ಯಾಸ ಪಡೆಯುವಂತೆ ಕೈಮುಗಿದು ಬೇಡಿಕೊಂಡು ಅವರ ಮನವೊಲಿಸುತ್ತಿದ್ದಾರೆ. ಜ.24ರಂದು ವಿದ್ಯಾರ್ಥಿಯೊಬ್ಬನ ಮನಗೆ ತೆರಳಿ ಆತನ ಮುಂದೆ ಕೈಮುಗಿದು ಬೇಡುತ್ತಿರುವ ಚಿತ್ರ ಇದೀಗ ವೈರಲ್ ಆಗಿದೆ. ಮೂರು ವರ್ಷದ ಹಿಂದೆ ಬಾಲು ಅವರು ಇಂಥದ್ದೊಂದು ವಿನೂತನ ಕ್ರಮಕ್ಕೆ ಮುಂದಾಗಿದ್ದರು. ಇದುವರೆಗೆ ಅವರು 150 ವಿದ್ಯಾರ್ಥಿಗಳ ಮನೆಗೆ ಖುದ್ದಾಗಿ ತೆರಳಿ ವಿದ್ಯಾಭ್ಯಾಸ ಕೈಗೊಳ್ಳುವಂತೆ ಕೈಮುಗಿದು ಕೇಳಿಕೊಂಡಿದ್ದಾರೆ.
-ಸಾಂದರ್ಭಿಕ ಚಿತ್ರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.